More

    ಒಂದೇ ಕುಟುಂಬದ ಐವರ ಆತ್ಮಹತ್ಯೆ; ಅನುಮಾನ ಯಾರ ಮೇಲೆ ಗೊತ್ತೇ?

    ಕೋಲಾರ: ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ಘಟನೆಯ ಕುರಿತ ಮತ್ತಷ್ಟು ಮಾಹಿತಿ ಬಹಿರಂಗಗೊಂಡಿದೆ.

    ಕೋಲಾರದ ಕಾರಂಜಿಕಟ್ಟೆ ಬಡಾವಣೆಯಲ್ಲಿ ನ. 7ರಂದು ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದರು. ಅಸ್ವಸ್ಥಗೊಂಡ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಕರೆದೊಯ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆರ್​.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಇದನ್ನೂ ಓದಿ: ಜನವರಿ ಒಳಗೆ ಅಧಿಕಾರ ಕಳೆದುಕೊಳ್ಳಲಿದ್ದಾರಂತೆ ಬಸವರಾಜ ಬೊಮ್ಮಾಯಿ; ಅವರ ಬಳಿಕ ಒಮ್ಮೆ ಅಲ್ಲ, 2 ಸಲ ಸಿಎಂ ಬದಲಾವಣೆ!

    ಮುನಿಯಪ್ಪ (70), ಅವರ ಪತ್ನಿ ನಾರಾಯಣಮ್ಮ (45), ಬಾಬು (45), ಪುಷ್ಪ (35) ಹಾಗೂ ಗಂಗೋತ್ರಿ (18) ಆತ್ಮಹತ್ಯೆಗೆ ಯತ್ನಿಸಿದ್ದವರು. ಇವರಲ್ಲಿ ಪುಷ್ಪಾ ಹೊರತುಪಡಿಸಿ ಉಳಿದ ನಾಲ್ವರೂ ಮಾರನೇ ದಿನ ಸಾವಿಗೀಡಾಗಿದ್ದರು. ಆ ನಂತರ ಪುಷ್ಪ ಕೂಡ ಮೃತಪಟ್ಟಿದ್ದರು.

    ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರ ಪೈಕಿ ನಾಲ್ವರ ಸಾವು; ಇನ್ನೊಬ್ಬರದು ಐಸಿಯುನಲ್ಲಿ ಜೀವನ್ಮರಣ ಹೋರಾಟ..

    ಮಗುವೊಂದರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆಗೆ ಹೆದರಿ ಈ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ ಎನ್ನಲಾಗಿದ್ದು, ಪ್ರಕರಣ ಸಂಬಂಧ ಡೆತ್​ನೋಟ್ ಆಧರಿಸಿ ತನಿಖೆ ಚುರುಕುಗೊಂಡಿದೆ.

    ಇದನ್ನೂ ಓದಿ: ಮದ್ವೆ ಆದ್ಮೇಲೆ ಫಸ್ಟ್​ನೈಟಲ್ಲಿ ಏನ್ಮಾಡ್ತಾರೆ, ಅದ್ನೇ ಮಾಡಿದ್ದೀವಿ..: ನಟಿ ರಚಿತಾ ರಾಮ್​

    ಈಗ ಘಟನೆಗೆ ಸಂಬಂಧಿಸಿದಂತೆ ಅಪಹರಣಕ್ಕೀಡಾದ ಮಗುವಿನ ತಂದೆಯ ಮೇಲೆಯೇ ಅನುಮಾನ ಮೂಡಿದೆ. ಮಗುವಿನ ತಂದೆ ಸತ್ಯ ಎಂಬಾತನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮಗುವಿನ ಮಾರಾಟ ಮತ್ತು ಅಪಹರಣದಲ್ಲಿ ತಂದೆಯ ಪಾತ್ರವಿರುವ‌ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿದೆ. ಮತ್ತೊಂದೆಡೆ ತಲೆಮರೆಸಿಕೊಂಡಿರುವ ಗೀತಾ ಎಂಬಾಕೆಯ ಶೋಧಕ್ಕೂ ಬಲೆ ಬೀಸಲಾಗಿದೆ.

    ಎಣ್ಣೆಗೂ ಹೆಣ್ಣಿಗೂ ಲಿಂಕಿಟ್ಟ ಪ್ರೇಮ್​; ರಚಿತಾ ಕೈಯಲ್ಲಿ ಬಾಟಲಿ, ರಕ್ಷಿತಾ ಸ್ಟೆಪ್ಸು; ಮತ್ತೆ ಕಿಚ್ಚು ಹೊತ್ತಿಸಲಿದ್ದಾರಾ ರಚ್ಚು?

    ಈ ಸಮಯದಲ್ಲಿ ಮಲಗಿದರೆ ಹೃದಯಾಘಾತ ಸಾಧ್ಯತೆ ಕಡಿಮೆ ಅಂತೆ; ಅಧ್ಯಯನದಲ್ಲಿ ಬಯಲಾಯಿತು ಹೃದಯದ ಆರೋಗ್ಯ ಮಾಹಿತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts