ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ)ದ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ತಂದೆ ಧ್ಯಾನ್ದೇವ್ ಕಚ್ರೂಜಿ ವಾಂಖೆಡೆ ಅವರು, ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ವಿರುದ್ಧ ಬಾಂಬೆ ಹೈಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ತಮ್ಮ ಪುತ್ರನ ವಿರುದ್ಧ ನಿತ್ಯ ಒಂದೊಂದು ಆರೋಪ ಮಾಡುತ್ತಾ ಬಂದಿರುವ ಮಲಿಕ್ರಿಂದ 1.25 ಕೋಟಿ ರೂಪಾಯಿ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ಕೇಸಿನಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ರ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸಿದಾಗಿನಿಂದ ಆ ಪ್ರಕರಣದ ಮೇಲ್ವಿಚಾರಣೆ ವಹಿಸಿದ್ದ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಹಲವು ರೀತಿಯ ವೈಯಕ್ತಿಕ ಆರೋಪಗಳನ್ನು ನವಾಬ್ ಮಲಿಕ್ ಮಾಡಿದ್ದಾರೆ. ಇದರಿಂದಾಗಿ ಸಮೀರ್ರ ಹೆಸರು ಮತ್ತು ವ್ಯಕ್ತಿತ್ವಕ್ಕೆ ಹಾಗೂ ನಮ್ಮ ಇಡೀ ಕುಟುಂಬದ ಸಾಮಾಜಿಕ ವರ್ಚಸ್ಸಿಗೆ ಸರಿಪಡಿಸಲಾಗದ ಹಾನಿ ಉಂಟಾಗಿದೆ ಎಂದು ಧ್ಯಾನ್ದೇವ್ ವಾಂಖೆಡೆ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ‘ನಾನು ಜಯಲಲಿತಾರ ಮಗಳು… ಮೈಸೂರಿನವಳು… ಸಾಕ್ಷಿ ಸಮೇತ ಸಾಬೀತು ಪಡಿಸುವೆ…’
ಜೊತೆಗೆ, ಸಚಿವ ಮಲಿಕ್, ಅವರ ಪಕ್ಷದ ಇತರ ನಾಯಕರು ಅಥವಾ ಅವರ ಆಣತಿಯಂತೆ ವರ್ತಿಸುವ ಯಾರೊಬ್ಬರೂ ಸಮೀರ್ ಬಗ್ಗೆ ಇನ್ನು ಮುಂದೆ ಮಾತನಾಡದಂತೆ ಹಾಗೂ ಮಾಧ್ಯಮಗಳಲ್ಲಿ ತಮ್ಮ ಕುಟುಂಬದ ಬಗ್ಗೆ ಬರೆಯುವುದಕ್ಕೆ ಅಥವಾ ಪ್ರಸಾರ ಮಾಡುವುದಕ್ಕೆ ನಿರ್ಬಂಧ ವಿಧಿಸುವಂತೆಯೂ ಕೋರಿರುವ ಧ್ಯಾನ್ದೇವ್ ವಾಂಖೆಡೆ, ತಮ್ಮ ಕುಟುಂಬವನ್ನು ವಂಚಕರೆಂಬಂತೆ ಮತ್ತು ಹಿಂದೂಗಳಲ್ಲ ಎಂದು ಬಿಂಬಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೊಕದ್ದಮೆಯು ನ.8 ರ ಸೋಮವಾರ ನ್ಯಾಯಾಲಯದಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. (ಏಜೆನ್ಸೀಸ್)
“ಆ ದಿನ ಪುನೀತ್ ಮೊದಲು ಹೋದ ಕ್ಲಿನಿಕ್ನ ಸಿಸಿಟಿವಿ ಫೂಟೇಜ್ ಬಿಡುಗಡೆ ಮಾಡಿ”