ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ್ ದ್ವಿವೇದಿಯವರ ಪುತ್ರ ಸಮೀರ್ ದ್ವಿವೇದಿ ಇಂದು ಬಿಜೆಪಿಗೆ ಸೇರ್ಪಡೆಯಾದರು.
ಬಿಜೆಪಿ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದಲ್ಲಿ ಸಮೀರ್ ಬಿಜೆಪಿಗೆ ಸೇರಿದ್ದಾರೆ. ಅವರು ಇದುವರೆಗೂ ರಾಜಕೀಯಕ್ಕೆ ಪ್ರವೇಶ ಮಾಡಿರಲಿಲ್ಲ ಎನ್ನಲಾಗಿದೆ.
ನಾನು ಇದೇ ಮೊದಲ ಬಾರಿಗೆ ರಾಜಕೀಯ ಪಕ್ಷವನ್ನು ಸೇರುತ್ತಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರ ಕೆಲಸದಿಂದ ಸ್ಫೂರ್ತಿ ಪಡೆದು ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದು ಸಮೀರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜನಾರ್ದನ ದ್ವಿವೇದಿ, ನನಗೆ ಸಮೀರ್ ಬಿಜೆಪಿ ಸೇರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅದು ಆತನ ಸ್ವತಂತ್ರ ನಿರ್ಧಾರ ಎಂದು ಹೇಳಿದ್ದಾರೆ.(ಏಜೆನ್ಸೀಸ್)