More

    ಸನಾತನ ಹೇಳಿಕೆ ವಿವಾದ; ಉದಯನಿಧಿ ಸ್ಟಾಲಿನ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ ಸುಬ್ರಮಣಿಯನ್​ ಸ್ವಾಮಿ

    ನವದೆಹಲಿ: ಸನಾತನ ಧರ್ಮದ ಕುರಿತು ಹೇಳಿಕೆ ವಿವಾದಕ್ಕೀಡಾಗಿರುವ ತಮಿಳುನಾಡು ಸಿಎಂ ಸ್ಟಾಲಿನ್​​ ಪುತ್ರ, ಸಚಿವ ಉದಯನಿಧಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲ ಆರ್​.ಎನ್​. ರವಿಗೆ ಪತ್ರ ಬರೆದಿರುವುದಾಗಿ ಹಿರಿಯ ಬಿಜೆಪಿ ನಾಯಕ, ಮಾಜಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್​ ಸ್ವಾಮಿ ತಿಳಿಸಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ಸ್ಟಾಲಿನ್​ ಪುತ್ರ ಉದಯನಿಧಿ ತಮಿಳುನಾಡು ಸರ್ಕಾರದಲ್ಲಿ ಸೃಜನಪಕ್ಷಪಾತದಿಂದ ಸಚಿವ ಸ್ಥಾನ ಪಡೆದಿದ್ಧಾರೆ ಎಂದು ಆರೋಪಿಸಿದ್ದಾರೆ.

    ಇದನ್ನೂ ಓದಿ: ಜಿ-20 ಶೃಂಗಸಭೆ; ಮಿಂಚಲಿದೆ ಕರ್ನಾಟಕದ ಕಸೂತಿ-ಬಿದ್ರಿ ಕಲೆ

    ಸೃಜನಪಕ್ಷಪಾತ ಎಸಗಿ ತಮಿಳುನಾಡು ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಸ್ಟಾಲಿನ್​ ಅವರ ಪುತ್ರ ಉದಯನಿಧಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ರಾಜ್ಯಪಾಲರಾದ ಆರ್​.ಎನ್​. ರವಿ ಅವರಿಗೆ ಪತ್ರ ಬರೆದಿದ್ದೇನೆ. ಸನಾತನ ಧರ್ಮದ ಕುರಿತು ಇವರು ಇವರು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದರೆ ನಾನು ತಮಿಳುನಾಡು ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ನಾನು ಪ್ರಾರಂಭಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

    ಸನಾತನ ಧರ್ಮ ಡೆಂಘಿ-ಮಲೇರಿಯಾದಂತೆ, ಅದನ್ನು ತೊಲಗಿಸಬೇಕು ಎಂದು ಹೇಳುವ ಮೂಲಕ ವಿವಾದಕ್ಕೆ ಒಳಗಾಗಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್, ಮತ್ತೆ ಮತ್ತೆ ಅದನ್ನೇ ಹೇಳುವೆ ಎನ್ನುವ ಮೂಲಕ ವಿವಾದದ ಬೆಂಕಿಗೆ ತುಪ್ಪ ಸುರಿದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts