ರಾಮನಗರ: ಮರಳು ದಂಧೆ ಮಾಡುವವರು ಕಾಂಗ್ರೆಸ್ ಪಕ್ಷದವರು. ಎಂಪಿ ಮತ್ತು ಅವನ ಚೇಲಾಗಳು ಮರಳು ದಂಧೆ ಮಾಡ್ತಾ ಇದ್ದಾರೆ. ಈ ದಂಧೆ ಮಾಡುಕೊಂಡು ಅಮಾಯಕರ ಜೀವದ ಜೊತೆ ಚೆಲ್ಲಾಟ ಆಡ್ತಾ ಇದ್ದಾರೆ ಇದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
ಇತ್ತೀಚಿಗೆ ಅರ್ಕಾವತಿ ನದಿಯಲ್ಲಿ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿ ಮೃತಪಟ್ಟಿದ್ದರು. ಈ ಪ್ರಕರಣ ಸಂಬಂಧ ರಾಮನಗರ ತಾಲೂಕಿನ ಕೂನಗಲ್ ಗ್ರಾಮದಲ್ಲಿ ಗುರುವಾರ ಪ್ರತಿಕ್ರಿಯಿಸಿದ ಎಚ್ಡಿಕೆ, ಅರ್ಕಾವತಿ ನದಿಯಲ್ಲಿ ಮರಳು ದಂಧೆಕೋರರು 15 ರಿಂದ 20 ಅಡಿ ಗುಂಡಿ ತೋಡಿದ್ದಾರೆ. ಕಳೆದ ಕಾಂಗ್ರೆಸ್ ಸರ್ಕಾರದ 5 ವರ್ಷದ ಅವಧಿಯಲ್ಲಿ ಈ ದಂಧೆ ನಡೆದಿದೆ ಎಂದು ಕಿಡಿಕಾರಿದರು.
ನಾನು ಶಾಸಕನಾಗಿದ್ದರೂ ಕೂಡ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಮರಳು ದಂಧೆಗೆ ಕಡಿವಾಣ ಹಾಕಲು ನನ್ನ ಕೈಯಲ್ಲಿ ಸಾಧ್ಯವಾಗಲಿಲ್ಲ. ಕಾಂಗ್ರೆಸ್ನವರೇ ಮರಳು ಮಾಫಿಯಾ ನಡೆಸುತ್ತಿದ್ದರು. ನನ್ನ ಪಕ್ಷದ ಕಾರ್ಯಕರ್ತರಿಗೆ ಮರಳು ದಂಧೆ ನಡೆಸದಂತೆ ಸೂಚಿಸಿದ್ದೇನೆ ಕುಮಾರಸ್ವಾಮಿ ಹೇಳಿದರು.
ಭೀಮಾತೀರದ ಮಹಾದೇವನ ಕೊಲ್ಲಲು ಬಂದದ್ದು 20 ಜನರ ಗ್ಯಾಂಗ್! ಬೆಚ್ಚಿಬೀಳಿಸುತ್ತೆ ಗುಂಡಿನ ದಾಳಿ
ತನ್ನದೇ ಸೆಕ್ಸ್ ವಿಡಿಯೋ ಮಾರುತ್ತಿದ್ದ ಬಸ್ ಕಂಡಕ್ಟರ್! ಪರಸ್ತ್ರೀಯರೊಂದಿಗೂ ಲೈಂಗಿಕ ಸಂಪರ್ಕ, 65 ವಿಡಿಯೋ ವಶ
ರ