More

    ಅಕ್ರಮ ಮರಳುಗಾರಿಕೆ 10 ಲೋಡ್ ಮರಳು ಸಹಿತ ಇಬ್ಬರ ಬಂಧನ

    ಮಂಗಳೂರು : ನಗರದ ಹೊರ ವಲಯದ ೈಸಲ್ ನಗರದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಕಂಕನಾಡಿ ನಗರ ಠಾಣೆ ಪೊಲೀಸರು 10 ಲೋಡ್ ಮರಳು, ಒಂದು ಜೆಸಿಬಿ ವಶಕ್ಕೆ ಪಡೆದು, ಇಬ್ಬರನ್ನು ಬಂಧಿಸಿದ್ದಾರೆ. ವಶಪಡಿಸಿಕೊಂಡು ಸೊತ್ತುಗಳ ಮೌಲ್ಯ ಒಟ್ಟು 3.70 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.


    ಕಂಕನಾಡಿ ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕಿ ಜ್ಯೋತಿ ಎನ್.ಎ. ಅವರು ರಾತ್ರಿ ರೌಂಡ್ಸ್‌ನಲ್ಲಿದ್ದ ವೇಳೆ ಗುರುವಾರ ಮುಂಜಾನೆ 3 ಗಂಟೆ ವೇಳೆಗೆ ೈಸಲ್ ನಗರದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. 3.20ಕ್ಕೆ ಸಿಬಂದಿಯೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದಾಗ ಸ್ಥಳದಲ್ಲಿ 2 ಯುನಿಟ್‌ನ 5 ಲೋಡ್ ಮರಳು ದಾಸ್ತಾನು ಇರಿಸಿದ್ದು ಪತ್ತೆಯಾಗಿದ್ದು, ಜೆಸಿಬಿಯೂ ಕಂಡು ಬಂದಿದೆ. ಜೆಸಿಬಿಯನ್ನು ಚಾಲಕ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ನದಿ ಕಿನಾರೆಯಿಂದ ಸುಮಾರು 500 ಮೀ. ದೂರದಲ್ಲಿ ಖಾಲಿ ಜಾಗದಲ್ಲಿ ಮತ್ತೆ 5 ಲೋಡ್ ಮರಳು ದಾಸ್ತಾನು ಇರಿಸಿರುವುದು ಪತ್ತೆಯಾಗಿದೆ.


    ನದಿಯಿಂದ ಸಾರ್ವಜನಿಕ ಖನಿಜ ವಸ್ತುವಾದ ಮರಳನ್ನು ಅಧಿಕೃತ ಪರವಾನಗಿ ಪಡೆಯದೆ ಸರ್ಕಾರಕ್ಕೆ ರಾಜಧನ ಪಾವತಿಸದೆ ಅಕ್ರಮವಾಗಿ ಯಾವುದೋ ವಾಹನದಲ್ಲಿ ತುಂಬಿಸಿಕೊಂಡು ಹೋಗಲು ಯತ್ನಿಸಿರುವುದು ಕಂಡು ಬಂದಿದೆ ಎಂದು ಉಪ ನಿರೀಕ್ಷಕರಿಯವರು ದೂರಿನಲ್ಲಿ ತಿಳಿಸಿದ್ದಾರೆ. ಸ್ವಾಧೀನಪಡಿಸಿಕೊಂಡ ಜೆಸಿಬಿಯ ಅಂದಾಜು ಮೌಲ್ಯ 3 ಲಕ್ಷ ರೂ. ಆಗಿದ್ದು, ಮರಳಿನ ಅಂದಾಜು ಮೌಲ್ಯ 70 ಸಾವಿರ ರೂ. ಆಗಿದೆ. ಪಂಚರ ಸಮಕ್ಷಮ ಸ್ಥಳ ಹಾಗೂ ಸೊತ್ತು ಸ್ವಾದೀನ ಮಹಜರು ಮಾಡಿ ಕಂಕನಾಡಿ ನಗರದ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts