ಕುಂದಾಪುರ: ನೋಂದಣಿಯಾಗದ ಆಟೋ ರಿಕ್ಷಾದಲ್ಲಿ ಶ್ರೀಗಂಧ ತುಂಡುಗಳನ್ನು ದಾಸ್ತಾನು ಮಾಡಿದ್ದ ವಂಡ್ಸೆ ಸಮೀಪದ ನಿವಾಸಿ ರಾಜೇಶ್(34) ಎಂಬಾತನನ್ನು ಕುಂದಾಪುರ ವಲಯ ಅರಣ್ಯಾಧಿಕಾರಿಗಳ ತಂಡ ಬಂಧಿಸಿ ಗಂಧ ಸಮೇತ ಆಟೋವನ್ನು ವಶಕ್ಕೆ ಪಡೆದಿದ್ದಾರೆ.
ಅರಣ್ಯಾಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯಂತೆ ವಂಡ್ಸೆ ಗ್ರಾಮದ ಹಕ್ಲುಮನೆ ಎಂಬಲ್ಲಿ ಆಟೋ ರಿಕ್ಷಾವೊಂದರಲ್ಲಿ ಶೇಖರಿಸಿದ್ದ 3.8 ಕೆಜಿಯಷ್ಟು ಗಂಧದ ಕೊರಡುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ್ ಕುಲಾಲ್, ಉಪವಲಯ ಅರಣ್ಯಾಧಿಕಾರಿ ಹೇಮಾ, ಶರತ್ ಗಾಣಿಗ, ಅರಣ್ಯ ರಕ್ಷಕ ದೇವಿಪ್ರಸಾದ್, ಉದಯ್ ವಂಡ್ಸೆ ಹಾಗೂ ಚಾಲಕ ಅಶೋಕ್ ಕಾರ್ಯಾಚರಣೆಯಲ್ಲಿದ್ದರು.