More

    ಹಸೆಮಣೆಯೇರಿದ ದೊಡ್ಡಣ್ಣ ಪುತ್ರ

    ವಿಜಯವಾಣಿ ಸುದ್ದಿಜಾಲ ಗದಗ

    ನಗರದ ಸಾಹಿತ್ಯ ಭವನದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಪುತ್ರ ಸುಗೂರೇಶ ಮತ್ತು ನಗರದ ಅಂದಾನಪ್ಪ ಗುಗ್ಗರಿ ಅವರ ಪುತ್ರಿ ಜ್ಯೋತಿ ಅವರ ಮದುವೆ ಗುರುವಾರ ಸರಳವಾಗಿ ನೆರವೇರಿತು. ಮದುವೆ ಸಮಾರಂಭದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ, ನಿರ್ವಪಕ ರಾಕ್​ಲೈನ್ ವೆಂಕಟೇಶ, ಮುಂಡರಗಿ ಅನ್ನದಾನೀಶ್ವರ ಸ್ವಾಮೀಜಿ ಸೇರಿ ವಿವಿಧ ಮಠಾಧೀಶರು, ಅನೇಕ ಗಣ್ಯರು ಆಗಮಿಸಿ ನೂತನ ವಧುವರರಿಗೆ ಶುಭ ಹಾರೈಸಿದರು.

    ಕೇಂದ್ರದ ಬಜೆಟ್ ಮೇಲೆ ಇದೆ ಎಲ್ಲರ ನಿರೀಕ್ಷೆ: ಕೇಂದ್ರದ ಬಜೆಟ್ ಮೇಲೆ ಎಲ್ಲರ ನಿರೀಕ್ಷೆ ಇದ್ದು, ದೇಶದ ಜನರ ಚಿತ್ತ ಅತ್ತ ನೆಟ್ಟಿದೆ ಎಂದು ಸಂಸದೆ ಸುಮಲತಾ ಅಂಬರೀಷ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉತ್ತರ ಕರ್ನಾಟಕದಿಂದ ಮಂಡ್ಯಕ್ಕೆ ಬಂದು ನನಗೆ ಸಪೋರ್ಟ್ ಮಾಡಿದ್ದಾರೆ. ಸ್ಥಳೀಯ ಚುನಾವಣೆ ಬಿಟ್ಟು ನನ್ನ ಕ್ಷೇತ್ರಕ್ಕೆ ಬಂದು ಚುನಾವಣೆಯಲ್ಲಿ ಪಾಲ್ಗೊಂಡು ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ಅವರು ಹೇಳಿದರು. ದೊಡ್ಡಣ್ಣನವರ ಮಗನ ಮದುವೆಗೆ ಬಹಳ ದಿನಗಳಿಂದ ನಾವೆಲ್ಲ ಕಾಯುತ್ತಿದ್ದೆವು. ಇದೀಗ ಗದಗಕ್ಕೆ ಬಂದು ನೂತನ ವಧುವರರಿಗೆ ಶುಭ ಹಾರೈಸಿದ್ದೇವೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts