More

    ಕಾಲು ಕಳೆದುಕೊಂಡ ಅಭಿಮಾನಿಯ ಬಾಳಿಗೆ ಬೆಳಕಾದ ಕಿಚ್ಚ!

    ಮೈಸೂರು: ಸ್ಯಾಂಡಲ್​ವುಡ್ ನಟ ಕಿಚ್ಚನ ಮತ್ತೊಂದು ಮಾನವೀಯ ಗುಣ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸೋಮವಾರ ಅನಾವರಣಗೊಂಡಿದೆ.

    ನಾಡದೇವಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ನಟ ಸುದೀಪ್ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದರು. ಮೈಸೂರಿಗೆ ಸುದೀಪ್​ ಬರುವ ವಿಷಯ ತಿಳಿದು ಅವರ ಅಭಿಮಾನಿ ರಾಘವ್​ ಎಂಬಾತ ದಾರಿ ಮಧ್ಯೆ ಕಾಯುತ್ತಿದ್ದರು. ಅಪಘಾತದಲ್ಲಿ ಕಾಲು ಕಳೆದುಕೊಂಡಿರುವ ರಾಘವ್ ತೀವ್ರ ಸಂಕಷ್ಟದಲ್ಲಿದ್ದಾರೆ. ಇದನ್ನೂ ಓದಿರಿ ಕಲಘಟಗಿ ಶಾಸಕರ ಪುತ್ರ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದಾಳಿ!

    ಮಾರ್ಗ ಮಧ್ಯೆ ರಾಘವ್ ಇರುವುದನ್ನ ನೋಡಿದ ಸುದೀಪ್​, ಕಾರು ನಿಲ್ಲಿಸಿ ಯೋಗಕ್ಷೇಮ ವಿಚಾರಿಸಿದರು. ಅಲ್ಲದೆ ರಾಘವ್​ಗೆ ಕೃತಕ ಕಾಲು ಜೋಡಣೆ ಮಾಡಿಸಲು ಸ್ಥಳದಲ್ಲೇ ಸಹಾಯಹಸ್ತ ಚಾಚಿದರು. ಮಾಣಿಕ್ಯನ ಈ ಸಹಾಯಕ್ಕೆ ಅವರ ಅಭಿಮಾನಿ ಭಾವುಕರಾದರು.

    ಫ್ಯಾಂಟಮ್ ಸಿನಿಮಾ ಚಿತ್ರೀಕರಣದಲ್ಲಿ ಬಿಜಿಯಾಗಿರುವ ಸುದೀಪ್, ನಿರ್ದೇಶಕ ಅನೂಪ್ ಭಂಡಾರಿ ಜತೆ ಚಾಮುಂಡಿ ಬೆಟ್ಟಕ್ಕೆ ಬಂದಿದ್ದರು. ಸುದೀಪ್ ಜತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಈ ವೇಳೆ ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ಕೈ ಸನ್ನೆ ಮೂಲಕವೇ ಸುದೀಪ್ ಮನವಿ ಮಾಡಿದರು.

    ಕನ್ನಡ ಚಿತ್ರರಂಗದ ಪೋಷಕ ನಟ ಶನಿಮಹಾದೇವಪ್ಪ ವಿಧಿವಶ

    ವರ್ಷಾಚರಣೆಗೆ ಕೇಕ್​ ಕತ್ತರಿಸುತ್ತಿದ್ದ ಯುವಕರ ಹಿಂದೆಯೇ ಹಾದುಹೋದ ದೆವ್ವ! ಭಯಾನಕ ವಿಡಿಯೋ ಇಲ್ಲಿದೆ

    54ರ ಫಾಸ್ಟರ್ ಜತೆ 24ರ ಯುವತಿ ಮದುವೆ: ಇಲ್ಲಿದೆ ಎಕ್ಸ್​ಕ್ಲೂಸಿವ್​ ಫೋಟೋಸ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts