ಮೈಸೂರು: ಸ್ಯಾಂಡಲ್ವುಡ್ ನಟ ಕಿಚ್ಚನ ಮತ್ತೊಂದು ಮಾನವೀಯ ಗುಣ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸೋಮವಾರ ಅನಾವರಣಗೊಂಡಿದೆ.
ನಾಡದೇವಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ನಟ ಸುದೀಪ್ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದರು. ಮೈಸೂರಿಗೆ ಸುದೀಪ್ ಬರುವ ವಿಷಯ ತಿಳಿದು ಅವರ ಅಭಿಮಾನಿ ರಾಘವ್ ಎಂಬಾತ ದಾರಿ ಮಧ್ಯೆ ಕಾಯುತ್ತಿದ್ದರು. ಅಪಘಾತದಲ್ಲಿ ಕಾಲು ಕಳೆದುಕೊಂಡಿರುವ ರಾಘವ್ ತೀವ್ರ ಸಂಕಷ್ಟದಲ್ಲಿದ್ದಾರೆ. ಇದನ್ನೂ ಓದಿರಿ ಕಲಘಟಗಿ ಶಾಸಕರ ಪುತ್ರ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದಾಳಿ!
ಮಾರ್ಗ ಮಧ್ಯೆ ರಾಘವ್ ಇರುವುದನ್ನ ನೋಡಿದ ಸುದೀಪ್, ಕಾರು ನಿಲ್ಲಿಸಿ ಯೋಗಕ್ಷೇಮ ವಿಚಾರಿಸಿದರು. ಅಲ್ಲದೆ ರಾಘವ್ಗೆ ಕೃತಕ ಕಾಲು ಜೋಡಣೆ ಮಾಡಿಸಲು ಸ್ಥಳದಲ್ಲೇ ಸಹಾಯಹಸ್ತ ಚಾಚಿದರು. ಮಾಣಿಕ್ಯನ ಈ ಸಹಾಯಕ್ಕೆ ಅವರ ಅಭಿಮಾನಿ ಭಾವುಕರಾದರು.
ಫ್ಯಾಂಟಮ್ ಸಿನಿಮಾ ಚಿತ್ರೀಕರಣದಲ್ಲಿ ಬಿಜಿಯಾಗಿರುವ ಸುದೀಪ್, ನಿರ್ದೇಶಕ ಅನೂಪ್ ಭಂಡಾರಿ ಜತೆ ಚಾಮುಂಡಿ ಬೆಟ್ಟಕ್ಕೆ ಬಂದಿದ್ದರು. ಸುದೀಪ್ ಜತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಈ ವೇಳೆ ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ಕೈ ಸನ್ನೆ ಮೂಲಕವೇ ಸುದೀಪ್ ಮನವಿ ಮಾಡಿದರು.
ವರ್ಷಾಚರಣೆಗೆ ಕೇಕ್ ಕತ್ತರಿಸುತ್ತಿದ್ದ ಯುವಕರ ಹಿಂದೆಯೇ ಹಾದುಹೋದ ದೆವ್ವ! ಭಯಾನಕ ವಿಡಿಯೋ ಇಲ್ಲಿದೆ
54ರ ಫಾಸ್ಟರ್ ಜತೆ 24ರ ಯುವತಿ ಮದುವೆ: ಇಲ್ಲಿದೆ ಎಕ್ಸ್ಕ್ಲೂಸಿವ್ ಫೋಟೋಸ್