More

    ಕಂಠಿ, ಸಾಹೇಬ ಚಿತ್ರ ನಿರ್ದೇಶಿಸಿದ್ದ ಯುವ ನಿರ್ದೇಶಕ ಭರತ್ ಇನ್ನಿಲ್ಲ​

    ಬೆಂಗಳೂರು: ರೋರಿಂಗ್​ ಸ್ಟಾರ್​ ಶ್ರೀಮುರುಳಿ ನಟನೆಯ ಕಂಠಿ ಸಿನಿಮಾ ನಿರ್ದೇಶಕ ಭರತ್ ಕೊನೆಯುಸಿರೆಳೆದಿದ್ದು, ಕನ್ನಡ ಚಿತ್ರರಂಗ ಯುವ ನಿರ್ದೇಶಕನನ್ನು ಕಳೆದುಕೊಂಡಂತಾಗಿದೆ.

    ಬಹು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ನಿರ್ದೇಶಕ ಭರತ್​ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಡಿ.24ರ ರಾತ್ರಿ 11ಗಂಟೆಗೆ ನಿಧನರಾಗಿದ್ದಾರೆ.

    ಇದನ್ನೂ ಓದಿ: ಮಗಳ ಪಾಲಿಗೆ ತಂದೆಯೇ ವಿಲನ್: ಡೈರಿಯಲ್ಲಿ ಅಪ್ಪನ ಪೈಶಾಚಿಕ ಕೃತ್ಯದ ಇಂಚಿಂಚೂ ಮಾಹಿತಿ ಬರೆದಿಟ್ಟ ಪುತ್ರಿ!

    ಶ್ರೀಮುರುಳಿ ಅಭಿನಯದ ಕಂಠಿ ಸಿನಿಮಾ ಹಾಗೂ ರವಿಚಂದ್ರನ್​ ಪುತ್ರ ಮನೋರಂಜನ್ ನಟನೆಯ ಸಾಹೇಬ ಚಿತ್ರಕ್ಕೂ‌ ಭರತ್​ ನಿರ್ದೇಶನ ಮಾಡಿದ್ದರು. ಭರತ್​ ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

    ಯುವ ನಿರ್ದೇಶಕನ ಅಕಾಲಿಕ ಮರಣಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದ್ದು, ದುಃಖಿತ ಕುಟುಂಬಕ್ಕೆ ಸಾಂತ್ವಾನ ಹೇಳಿದೆ. (ದಿಗ್ವಿಜಯ ನ್ಯೂಸ್​)

    ಇದನ್ನೂ ಓದಿ: ಪರಿಚಯಸ್ಥ ಯುವಕನ ಮಾತು ನಂಬಿ ಕೆಲಸಕ್ಕಾಗಿ ರೆಸ್ಯೂಮ್ ಹಿಡಿದುಕೊಂಡು ಹೋದ ಯುವತಿಗೆ ಕಾದಿತ್ತು​ ಶಾಕ್​!​

    ಹೂವುಗಳೆಂದರೆ ಇಷ್ಟ ಎಂದ ಅಥಿಯಾ ಶೆಟ್ಟಿ, ಗುಲಾಬಿ ಕಳುಹಿಸಿದ್ರು ಕೆಎಲ್ ರಾಹುಲ್!

    ನಟ ರಮೇಶ್ ಅರವಿಂದ್ ಮನೆಯಲ್ಲಿ ಮದುವೆ ಸಂಭ್ರಮ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts