ತಿರುಪತಿ: ಕಳೆದ ವರ್ಷದ ಅಂತ್ಯದಲ್ಲಿ ನಟ ರಣಬೀರ್ ಕಪೂರ್, ಸಂದೀಪ್ ರೆಡ್ಡಿ ವಂಗಾ ಕಂಬಿನೇಷನ್ನ ಅನಿಮಲ್ ಚಿತ್ರ ಬಾಕ್ಸ್ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ನಿರ್ಮಾಪಕರ ಮುಖದಲ್ಲಿ ಮಂದಹಾಸ ಮೂಡಿಸಿತ್ತು. ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದ ಚಿತ್ರವು ಬ್ಲಾಕ್ಬಸ್ಟರ್ ಎನ್ನಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು.
ಡಿಸೆಂಬರ್ 01ರಂದು ಬಿಡುಗಡೆಯಾದ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ದೊರೆತ್ತಿದ್ದು, ಹಲವೆಡೆ ಹೌಸ್ಫುಲ್ ಪ್ರದರ್ಶನ ಕಂಡಿತ್ತು. ಇತ್ತ ಅನಿಮಲ್ ಚಿತ್ರವನ್ನು ಹಲವಾರು ಮಂದಿ ಹಾಡಿ ಹೊಗಳಿದರೆ ಕೆಲವರು ಇದನ್ನು ಡಿಸಾಸ್ಟರ್ ಎಂದು ತೆಗಳಿದ್ದಾರೆ.ಇನ್ನು ಅನಿಮಲ್ನಂತಹ ಚಿತ್ರಗಳ ಸಕ್ಸಸ್ ಬಹಳ ಡೇಂಜರಸ್ ಎಂದು ಬಾಲಿವುಡ್ನ ಹಿರಿಯ ವಿಮರ್ಶಕರು ಅಭಿಪ್ರಾಯಪಟ್ಟಿದ್ದರು.
ಇದನ್ನೂ ಓದಿ: ಸಂದೇಶ್ಖಾಲಿ ಪ್ರಕರಣ; ಪ್ರಧಾನಿ ಮೋದಿ ಭೇಟಿ ಬಳಿಕ ಸಂತ್ರಸ್ತರು ಹೇಳಿದ್ದೇನು?
ಈ ಚಿತ್ರದ ಯಶಸ್ಸಿನ ಬಳಿಕ ಸಾಲು ಸಾಲು ಆಫರ್ ಗಿಟ್ಟಿಸಿಕೊಂಡಿದ್ದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಬುಧವಾರ ತಿರುಪತಿ ತಿಮ್ಮಪ್ಪನಿಗೆ ದರ್ಶನ ಪಡೆದು ಹರಕೆ ತೀರಿಸಿದ್ದಾರೆ. ತಿರುಮಲದಲ್ಲಿರುವ ಸೆಲೆಬ್ರಿಟಿ ಸ್ಪಾಟ್ನಲ್ಲಿ ಕ್ಯಾಮರಾಗಳಿಗೆ ಪೋಸ್ ನೀಡಿದ ಸಂದೀಪ್ ಬಳಿಕ ಕೆಲಕಾಲ ಅಭಿಮಾನಿಗಳ ಜೊತೆ ಮಾತನಾಡಿದ್ದಾರೆ.
ಈ ವೇಳೆ ಅಭಿಮಾನಿಯೊಬ್ಬರು ಮುಂದಿನ ಸಿನಿಮಾ ಯಾವುದು ಎಂದು ಕೇಳಿದಾಗ ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಅವರೊಂದಿಗೆ ಸ್ಪರಿಟ್ ಚಿತ್ರ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅರ್ಜುನ್ ರೆಡ್ಡಿ ಹಿಂದಿ ರೀಮೇಕ್ ಕಬೀರ್ ಸಿಂಗ್ ಮೂಲಕ ಸಂದೀಪ್ ರೆಡ್ಡಿ ವಂಗಾ ಬಾಲಿವುಡ್ ಪ್ರವೇಶಿಸಿದ್ದರು. ಕಳೆದ ವರ್ಷ ಅನಿಮಲ್ ಸಿನಿಮಾವನ್ನು ನಿರ್ದೇಶನ ಮಾಡುವ ಮೂಲಕ ಬಿಗ್ ಹಿಟ್ ಪಡೆದಿದ್ದಾರೆ.