ಹದಿಹರೆಯದಲ್ಲಿ ಎಲ್ಲದರ ಅರಿವೂ ಅಗತ್ಯ: ಪ್ರಭಾರ ಮುಖ್ಯಶಿಕ್ಷಕಿ ಅಂಬುಜಾ ಹೇಳಿಕೆ

blank
blank

ಸಂಡೂರು: ಹದಿಹರೆಯದಲ್ಲಿ ಆರೋಗ್ಯವಾಗಿರಲು ಎಲ್ಲ ರೀತಿಯ ಅರಿವು ಅಗತ್ಯ ಎಂದು ಪ್ರಭಾರ ಮುಖ್ಯಶಿಕ್ಷಕಿ ಅಂಬುಜಾ ತಿಳಿಸಿದರು.

ತಾಲೂಕಿನ ತೋರಣಗಲ್ಲು ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಹದಿಹರೆಯದವರ ಆರೋಗ್ಯ ದಿನಾಚರಣೆ ಕುರಿತು ಶುಕ್ರವಾರ ಮಾತನಾಡಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ ಮಾತನಾಡಿ, ಅಕ್ಟೋಬರ್ ಎರಡರವರೆಗೆ ವಿವಿಧ ಆರೋಗ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಹದಿಹರೆಯದ ಮಕ್ಕಳಿಗೆ ದೈಹಿಕ, ಮಾನಸಿಕ, ಸಾಮಾಜಿಕ ಬೆಳವಣಿಗೆ ಕುರಿತು ಅರಿವು ಅವಶ್ಯ. ಇದಿಲ್ಲದಿದ್ದರೆ ಮನಸ್ಸು ಬೇಡವಾದ ಕಡೆ ಹರಿದು ಹಲವು ಸಮಸ್ಯೆ ಎದುರಿಸುವ ಜತೆಗೆ ಆರೋಗ್ಯವೂ ಹಾಳಾಗುತ್ತದೆ. ಹೀಗಾಗಿ ಸ್ಥಳೀಯವಾಗಿ ಸಿಗುವ ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚಾಗಿ ಸೇವಿಸಿ ಆರೋಗ್ಯಕರ ಬದುಕು ಸಾಗಿಸಬೇಕು ಎಂದರು.

ಹೆಣ್ಣು ಮಕ್ಕಳು ಗುಡ್ ಆ್ಯಂಡ್ ಬ್ಯಾಡ್ ಟಚ್ ಬಗ್ಗೆ ಎಚ್ಚರ ವಹಿಸಬೇಕು. ಎಲ್ಲರೂ ಪೋಕ್ಸೋ ಕಾಯ್ದೆ ಕುರಿತು ತಿಳಿದುಕೊಳ್ಳಬೇಕು. ಯಾವುದೇ ಸಮಯದಲ್ಲಿ ಅಪಾಯದ ಮುನ್ಸೂಚನೆ ಕಂಡುಬಂದಾಗ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಬಹುದು. ಅಪಾಯಕ್ಕೆ ಸಿಲುಕುವ ಮುನ್ನವೇ ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.

ನಂತರ ಗುರಿ ಮತ್ತು ಸಾಧನೆ ಕುರಿತು ಮಕ್ಕಳಿಂದ ಬೆಲೂನ್ ಚಟುವಟಿಕೆ ಮಾಡಿಸಿ ವಿಜೇತರಿಗೆ ಪುಸ್ತಕ, ಪೆನ್ನು ನೀಡಲಾಯಿತು. ಶಿಕ್ಷಕಿ ದೀಪಾ, ಉಜ್ವಲಾ, ಪುಷ್ಪಲತಾ, ಅರ್‌ಕೆಎಸ್‌ಕೆ ಪ್ರಶಾಂತ್ ಇತರರಿದ್ದರು.

Share This Article

ಈ ಆಹಾರಗಳ ಅತಿಯಾದ ಸೇವನೆಯಿಂದ ಕಿಡ್ನಿ ಸ್ಟೋನ್‌ ಉಂಟಾಗಬಹುದು: ತಜ್ಞರ ಎಚ್ಚರಿಕೆ..! Health Tips

Health Tips: ಮೂತ್ರಪಿಂಡದಲ್ಲಿ ಕಲ್ಲುಗಳಿದ್ದರೆ ಸೊಂಟ, ಹೊಟ್ಟೆ ಮತ್ತು ಬೆನ್ನಿನಲ್ಲಿ ತೀವ್ರವಾದ ನೋವು ಉಂಟಾಗುತ್ತದೆ. ಈ…

ದೇಹದಲ್ಲಿ ಈ ವಿಚಿತ್ರ ಸೂಚನೆಗಳು ಕಾಣಿಸಿದ್ರೆ ಸಕ್ಕರೆ ಕಾಯಿಲೆ ಇದೆ ಎಂದರ್ಥ! | Diabetes

Diabetes: ಪ್ರಸ್ತುತ ಬದಲಾಗುತ್ತಿರುವ ಜೀವನಶೈಲಿ, ಸರಿಯಾದ ಆಹಾರ ಪದ್ಧತಿ ಇಲ್ಲದಿರುವುದು, ವ್ಯಾಯಾಮದ ಕೊರತೆ ಇತ್ಯಾದಿಗಳಿಂದಾಗಿ, ಚಿಕ್ಕ…