ಚಿಕಿತ್ಸಾಲಯ ಕೂಡಲೇ ಆರಂಭಿಸಿ

blank
blank

ಸಂಡೂರು: ತಾಲೂಕಿಗೆ ಮಂಜೂರಾದ ಕಾರ್ಮಿಕ ರಾಜ್ಯ ವಿಮಾ ಚಿಕಿತ್ಸಾಲಯ ಕೂಡಲೇ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಕಾರ್ಮಿಕ ಇಲಾಖೆ ಸಹಾಯಕ ಪರಶುರಾಮ್‌ಗೆ ಸಿಐಟಿಯು ಮುಖಂಡರು ಮನವಿ ಸಲ್ಲಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯಬಾಬು ಮಾತನಾಡಿ, ನೌಕರರ ವೇತನದಿಂದ ಕಡಿತಗೊಳಿಸುವ ಮೂಲಕ ಪ್ರತಿ ತಿಂಗಳು 1.30 ಕೋಟಿ ರೂ. ಇಎಸ್‌ಐಸಿ ಸಂಸ್ಥೆಗೆ ಸಂದಾಯ ಮಾಡಲಾಗುತ್ತಿದೆ. ಅದರಲ್ಲಿ ಸಂಡೂರು ತಾಲೂಕಿನ ಸಿಂಹಪಾಲು ಸೇರಿದೆ. ಆರೋಗ್ಯ ಚಿಕಿತ್ಸೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ 100 ಹಾಸಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಳ್ಳಾರಿ ಹಾಗೂ ಸಂಡೂರಿನಲ್ಲಿ 50 ಹಾಸಿಗೆ ಆಸ್ಪತ್ರೆ ಕಲ್ಪಿಸುವ ಉದ್ದೇಶದಿಂದ ಹೊಸದಾಗಿ ಕಾರ್ಮಿಕ ರಾಜ್ಯ ವಿಮಾ ಚಿಕಿತ್ಸಾಲಯ ಮಂಜೂರಾಗಿದೆ. ಆದರೆ ಇನ್ನೂ ಪ್ರಾರಂಭವಾಗಿಲ್ಲ. ಕೂಡಲೇ ಆರಂಭಿಸಬೇಕು ಎಂದು ಒತ್ತಾಯಿಸಿದರು. ಸಿಐಟಿಯು ಸಂಚಾಲಕ ಜೆ.ಎಂ.ಚೆನ್ನಬಸಯ್ಯ, ಕಟ್ಟಡ ಕಾರ್ಮಿಕ ಸಂಘದ ತಾಲೂಕು ಅಧ್ಯಕ್ಷ ವಿ.ದೇವಣ್ಣ, ಸಿಪಿಐ(ಎಂ) ಕಾರ್ಯದರ್ಶಿ ಎ.ಸ್ವಾಮಿ, ಕಾರ್ಮಿಕ ಸಂಘಟನೆಯ ಬಾಬಯ್ಯ, ಹನುಮಂತ, ದೇವರಾಜ ಇತರರಿದ್ದರು.

Share This Article

ಈ ಆಹಾರಗಳ ಅತಿಯಾದ ಸೇವನೆಯಿಂದ ಕಿಡ್ನಿ ಸ್ಟೋನ್‌ ಉಂಟಾಗಬಹುದು: ತಜ್ಞರ ಎಚ್ಚರಿಕೆ..! Health Tips

Health Tips: ಮೂತ್ರಪಿಂಡದಲ್ಲಿ ಕಲ್ಲುಗಳಿದ್ದರೆ ಸೊಂಟ, ಹೊಟ್ಟೆ ಮತ್ತು ಬೆನ್ನಿನಲ್ಲಿ ತೀವ್ರವಾದ ನೋವು ಉಂಟಾಗುತ್ತದೆ. ಈ…

ದೇಹದಲ್ಲಿ ಈ ವಿಚಿತ್ರ ಸೂಚನೆಗಳು ಕಾಣಿಸಿದ್ರೆ ಸಕ್ಕರೆ ಕಾಯಿಲೆ ಇದೆ ಎಂದರ್ಥ! | Diabetes

Diabetes: ಪ್ರಸ್ತುತ ಬದಲಾಗುತ್ತಿರುವ ಜೀವನಶೈಲಿ, ಸರಿಯಾದ ಆಹಾರ ಪದ್ಧತಿ ಇಲ್ಲದಿರುವುದು, ವ್ಯಾಯಾಮದ ಕೊರತೆ ಇತ್ಯಾದಿಗಳಿಂದಾಗಿ, ಚಿಕ್ಕ…