ಬೋನಿಗೆ ಬಿದ್ದ ಚಿರತೆ

blank

ಸಂಡೂರು: ತಾಲೂಕಿನ ಸಿದ್ದಾಪುರ ಬಳಿ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಚಿರತೆ ಸೋಮವಾರ ಬೆಳಗಿನ ಜಾವ ಬಿದ್ದಿದೆ. ಆರ್‌ಎಫ್‌ಒ ಉಮೇಶ್, ಡಿಆರ್‌ಎಫ್‌ಒ ಶಿವಪ್ಪ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಈ ವೇಳೆ ಮಾತನಾಡಿದ ಆರ್‌ಎಫ್‌ಒ ಉಮೇಶ್, ಕೆಲ ದಿನಗಳ ಹಿಂದಿನಿಂದ ಚಿರತೆಯೊಂದು ಕಾಣಿಸಿಕೊಳ್ಳುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು. ಮೂರು ದಿನಗಳ ಹಿಂದೆ ಆಯಕಟ್ಟಿನ ಸ್ಥಳದಲ್ಲಿ ಬೋನನ್ನು ಅಳವಡಿಸಲಾಗಿತ್ತು. ಇಂದು ಬೆಳಗಿನ ಜಾವ ಚಿರತೆ ಬೋನಿಗೆ ಬಿದ್ದಿದೆ. ಮೇಲಧಿಕಾರಿಗಳ ಆದೇಶ ಬಂದ ಬಳಿಕ ಸೆರೆ ಸಿಕ್ಕ ಚಿರತೆಯನ್ನು ಸೂಚಿತ ಅರಣ್ಯ ಪ್ರದೇಶದಲ್ಲಿ ಬಿಡಲಾಗುವುದು ಎಂದು ತಿಳಿಸಿದ್ದಾರೆ.

Share This Article

ಮಳೆಗಾಲದಲ್ಲಿ ಈ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಬಳಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿಕೊಳ್ಳಿ! rainy season

rainy season: ಮಳೆಗಾಲದಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು ಅಥವಾ ಇತರ ಶಿಲೀಂಧ್ರ ಸೋಂಕುಗಳು ಸುಲಭವಾಗಿ ಹರಡುತ್ತವೆ. ಮಳೆಗಾಲದಲ್ಲಿ…

ಸಣ್ಣ ತೂಕ ಎತ್ತಿದರೂ ಸುಸ್ತಾಗುತ್ತಾ? ಹಾಗಾದರೆ ಈ ಆಹಾರಗಳಿಂದ ನರ ದೌರ್ಬಲ್ಯ ನಿವಾರಿಸಿ… Health Tips

Health Tips : ದೇಹವು ಸರಿಯಾದ ಪೋಷಕಾಂಶಗಳನ್ನು ಪಡೆಯದಿದ್ದರೆ, ಅನೇಕ ರೋಗಗಳಿಗೆ ತುತ್ತಾಗುತ್ತದೆ. ನಿಮ್ಮಲ್ಲಿರುವ ಕೆಟ್ಟ…