More

    ಬಿಜೆಪಿಯೊಂದಿಗೆ ಮುಂದುವರೆಯಲಿರುವ ಸಂಗಣ್ಣ, ಸಿಂಹ, ಗೌಡ

    ಹುಬ್ಬಳ್ಳಿ : ಸಂಸದರಾದ ಕರಡಿ ಸಂಗಣ್ಣ, ಪ್ರತಾಪ ಸಿಂಹ, ಸದಾನಂದಗೌಡ ಅವರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಇವರೆಲ್ಲ ಪಕ್ಷ ಕಟ್ಟಿ, ಬೆಳೆಸಿದವರು. ಸದಾ ಬಿಜೆಪಿಯೊಂದಿಗೇ ಇರುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

    ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಸಿಗಲಿಲ್ಲವೆಂದು ಮನಸ್ಸಿಗೆ ನೋವಾಗುವುದು ಸಹಜ. ಇಂತಹ ಮುಖಂಡರ ಮನವೊಲಿಸಿ, ಸಮಾಧಾನಪಡಿಸಲಾಗುವುದು ಎಂದರು.

    ಬಿಜೆಪಿಯಿಂದ ಬಂಡಾಯ ಎದ್ದಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಸಮಾಧಾನಪಡಿಸುವಲ್ಲಿ ನಮ್ಮ ಪಕ್ಷದ ನಾಯಕರು ಯಶಸ್ವಿಯಾಗುತ್ತಾರೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದು ಅವರ ಬಯಕೆ. ಅವರು ಸದಾ ಬಿಜೆಪಿಯೊಂದಿಗೆ ಇರುತ್ತಾರೆ ಎಂದು ಹೇಳಿದರು.

    ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ರಾಜಕೀಯ ನಾಟಕದ ಒಂದು ಭಾಗ. ಮತಕ್ಕಾಗಿ ಪಾದಯಾತ್ರೆ ಮಾಡಿದ್ದರು. ಆ ಪಕ್ಷದ ಮುಖಂಡರಿಗೆ ಯೋಜನೆ ಬಗ್ಗೆ ಕಾಳಜಿ ಇಲ್ಲ ಎಂದು ದೂರಿದರು.

    ಅನೇಕ ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್​ನಲ್ಲಿ ಅಭ್ಯರ್ಥಿಗಳ ಕೊರತೆ ಕಾಣುತ್ತಿದೆ. ಹೀಗಾಗಿ, ಮಂತ್ರಿಗಳನ್ನು ಚುನಾವಣೆ ಕಣಕ್ಕೆ ಇಳಿಸುತ್ತಿದ್ದಾರೆ. ಕೆಲವೆಡೆ ಅವರ ಮಕ್ಕಳನ್ನು ಸ್ಪರ್ಧೆಗೆ ಕರೆತರುತ್ತಿದ್ದಾರೆ ಎಂದು ಟೀಕಿಸಿದರು.

    ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಲೋಕಸಭೆ ಚುನಾವಣೆ ಟಿಕೆಟ್ ಇನ್ನೆರೆಡು ದಿನಗಳಲ್ಲಿ ಅಂತಿಮಗೊಳ್ಳಲಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts