ಬಸವನಬಾಗೇವಾಡಿ : ವಿಜಯಪುರ ನಗರದ ಜ್ಯೆನಾಪುರ ಲೇಔಟ್ನಲ್ಲಿ ಮುಸುಕುಧಾರಿ ದರೋಡೆಕೋರರಿಂದ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ ಕನ್ನಾಳ ಮಂಗಳವಾರ ರಾತ್ರಿ ನಿಧನರಾಗಿದ್ದು, ಬುಧವಾರ ರಾತ್ರಿ ತಾಲೂಕಿನ ದಿಂಡವಾರ ಗ್ರಾಮದಲ್ಲಿ ವೀರಶೈವ ಲಿಂಗಾಯತ ವಿಧಿ ವಿಧಾನದ ಪ್ರಕಾರ ಅವರ ಅಂತ್ಯಕ್ರಿಯೆ ನಡೆಯಿತು. ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಕುಟುಂಬದ ಸದಸ್ಯರು, ಬಂಧುಗಳು, ಸ್ನೇಹಿತರು ಪಾಲ್ಗೊಂಡಿದ್ದರು.
