More

    ರೈಲು ಅಪಘಾತ | ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಒಡಿಶಾಗೆ ಸಂತೋಷ್ ಲಾಡ್

    ಬೆಂಗಳೂರು: ಒಡಿಶಾದಲ್ಲಿ ದೇಶದ ಅತೀ ಭೀಕರ ರೈಲು ಅಪಘಾತ ನಡೆದಿದ್ದು ಅಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸ್ ಸುರಕ್ಷಿತವಾಗಿ ಕರೆತರಲು ಸಚಿವ ಸಂತೋಷ್ ಲಾಡ್ ತೆರಳಲಿದ್ದಾರೆ.

    ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವನ್ನು ಒದಗಿಸಲು ಸೂಚನೆ ನೀಡಿದ್ದಾರೆ.

    ಇದನ್ನೂ ಓದಿ: ಒಡಿಶಾ ರೈಲು ದುರಂತ: ಏರುತ್ತಲೇ ಇದೆ ಸಾವಿನ ಸಂಖ್ಯೆ, 238 ಮಂದಿ ಮೃತ, 900ಕ್ಕೂ ಹೆಚ್ಚು ಮಂದಿಗೆ ಗಾಯ

    ರಾಜ್ಯದ ಪ್ರಯಾಣಿಕರ ಸುರಕ್ಷಿತವಾಗಿ ಕರೆತರಲು ತೆರಳುತ್ತಿರುವ ಸಚಿವ ಸಂತೋಷ್ ಲಾಡ್ ಓರಿಸ್ಸಾಗೆ ಕಾರ್ಮಿಕ ಸಚಿವ ಸಂತೊಷ್ ಲಾಡ್ ತೆರಳಲಿದ್ದಾರೆ. ಕನ್ನಡಿಗರನ್ನ ಸುರಕ್ಷಿತವಾಗಿ ಕರೆತರಲು ಅವರನ್ನು ಸಿಎಂ ಸಿದ್ದರಾಮಯ್ಯ ನಿಯೋಜಿಸಿದ್ದು ಅವರೊಂದಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿದಂತೆ ಇತರೆ ಪ್ರಮುಖ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಹೊರಟಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts