ಕಾರವಾರ: ಜಿಲ್ಲೆಯಲ್ಲಿನ ಎಲ್ಲಾ (SAPAYI KARMACHARI) ಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣ ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಂಡು ಎಲ್ಲರಿಗೂ ವಸತಿ ಸೌಕರ್ಯ ಕಲ್ಪಿಸುವಂತೆ ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ನಗರ ವ್ಯಾಪ್ತಿಯಲ್ಲಿ ವಾಸದ ಮನೆಗಳನ್ನು ನಿರ್ಮಿಸುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಈಗಾಗಲೇ ನಿರ್ಮಾಣ ಹಂತದಲ್ಲಿರುವ ಮನೆಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಿ ನೌಕರರಿಗೆ ಹಂಚಿಕೆ ಮಾಡುವಂತೆ ಮತ್ತು ಮನೆ ನಿರ್ಮಾಣಕ್ಕೆ ಜಾಗದ ಕೊರತೆಯಿದ್ದಲ್ಲಿ ಸಂಬಂದಪಟ್ಟ ತಾಲೂಕಿನ ತಹಸೀಲ್ದಾರ್ ಗಳನ್ನು ಸಂಪರ್ಕಿಸುವಂತೆ ಸೂಚಿಸಿದರು.
ಮಲದ ಗುಂಡಿಗಳಿಗೆ SAPAYI KARMACHARI ಇಳಿಸದಿರಿ
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮ್ಯಾನ್ ಹೋಲ್, ಮಲದ ಗುಂಡಿಗಳನ್ನು ಸ್ವಚ್ಛಗೊಳಿಸಲು ಕಡ್ಡಾಯವಾಗಿ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರವನ್ನು ಬಳಸುವಂತೆ ಹಾಗೂ ಈ ಕಾರ್ಯಗಳಿಗೆ ಯಾವುದೇ ಕಾರಣಕ್ಕೂ ಕಾರ್ಮಿಕರನ್ನು ಬಳಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಪೌರ ಕಾರ್ಮಿಕರಿಗೆ ಪ್ರತೀ ತಿಂಗಳು ನಿಗಧಿತ ಅವಧಿಯೊಳಗೆ ವೇತನವನ್ನು ಪಾವತಿಸುವಂತೆ ಮತ್ತು ಇ.ಪಿ.ಎಫ್ ಮತ್ತು ಇ.ಎಸ್.ಐ ನ್ನು ಕಡಿತ ಮಾಡಿ ಸಂಬಂದಪಟ್ಟ ಇಲಾಖೆಗೆ ಪಾವತಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು ಈ ಬಗ್ಗೆ ಪ್ರತೀ ತಿಂಗಳು ತಪಾಸಣೆ ನಡೆಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಸೂಚಿಸಿದರು.
SAPAYI KARMACHARI ಪೌರ ಕಾರ್ಮಿಕರಿಗೆ ಸುರಕ್ಷಾ ಪರಿಕರಗಳಾದ ಗಮ್ ಬೂಟ್, ಸ್ಯಾನಿಟೈಸರ್, ಗ್ಲೌಸ್, ಮಾಸ್ಕ್, ಸಮವಸ್ತ್ರ, ರೇನ್ಕೋಟ್ ಗಳನ್ನು ಕಡ್ಡಾಯವಾಗಿ ನೀಡುವಂತೆ ಮತ್ತು ಈ ಉಪಕರಣಗಳನ್ನು ಪೌರ ಕಾರ್ಮಿಕರು ಕಡ್ಡಾಯವಾಗಿ ಬಳಸುವ ಕುರಿತಂತೆ ಅಧಿಕಾರಿಗಳು ಪರಿಶೀಲಿಸಬೇಕು ಎಂದರು.
SAPAYI KARMACHARI ಪೌರ ಕಾರ್ಮಿಕರಿಗೆ ಮೂರು ತಿಂಗಳಿಗೊಮ್ಮ ಆರೋಗ್ಯ ತಪಾಸಣೆ ಮತ್ತು ವರ್ಷಕ್ಕೊಮ್ಮೆ ಅವರ ಆರೋಗ್ಯದ ಕುರಿತು ಮಾಸ್ಟರ್ ಚೆಕಪ್ ನ್ನು ಕಡ್ಡಾಯವಾಗಿ ಮಾಡಿಸಬೇಕು ಹಾಗೂ ಪ್ರತೀ ದಿನ ಉಪಹಾರ ನೀಡುವಂತೆ ಮತ್ತು ಉಪಹಾರದಲ್ಲಿ ಪೌಷ್ಠಿಕಾಂಶಗಳು ಇರುವ ಬಗ್ಗೆ ಪರಿಶೀಲಿಸಬೇಕು ಮತ್ತು ವಿಶ್ರಾಂತಿ ಗೃಹ ನಿರ್ಮಾಣ ಮಾಡಿ ಅದರಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು.
SAPAYI KARMACHARI ಪೌರ ಕಾರ್ಮಿಕರಿಗೆ ಮೂರು ತಿಂಗಳಿಗೊಮ್ಮ ಆರೋಗ್ಯ ತಪಾಸಣೆ ಮತ್ತು ವರ್ಷಕ್ಕೊಮ್ಮೆ ಅವರ ಆರೋಗ್ಯದ ಕುರಿತು ಮಾಸ್ಟರ್ ಚೆಕಪ್ ನ್ನು ಕಡ್ಡಾಯವಾಗಿ ಮಾಡಿಸಬೇಕು ಹಾಗೂ ಪ್ರತೀ ದಿನ ಉಪಹಾರ ನೀಡುವಂತೆ ಮತ್ತು ಉಪಹಾರದಲ್ಲಿ ಪೌಷ್ಠಿಕಾಂಶಗಳು ಇರುವ ಬಗ್ಗೆ ಪರಿಶೀಲಿಸಬೇಕು ಮತ್ತು ವಿಶ್ರಾಂತಿ ಗೃಹ ನಿರ್ಮಾಣ ಮಾಡಿ ಅದರಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು.
ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸರ್ಕಾರಿ ಮತ್ತು ಖಾಸಗಿ ತೆರೆದ ಬಾವಿ ಅಥವಾ ಕೊಳವೆ ಬಾವಿಗಳು ಇರುವ ಕುರಿತಂತೆ ಪರಿಶೀಲನೆ ನಡೆಸಿ ಅವುಗಳ ಸುತ್ತ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಂಡು ಯಾವುದೇ ಅಪಾಯಗಳು ಸಂಭವಿಸಿದ0ತೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ತೆರೆದ ಬಾವಿ ಅಥವಾ ಕೊಳವೆ ಬಾವಿಗಳ ಸುತ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿರುವ ಕುರಿತಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಂದ ದೃಢೀಕರಣ ಪತ್ರ ಪಡೆಯುವಂತೆ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್, ಪೌರಾಯುಕ್ತ ಜಗದೀಶ್ ಹುಲಗಜ್ಜಿ ಹಾಗೂ ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು , ಜಿಲ್ಲಾ ಮಟ್ಟದ ಜಾಗೃತ ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್, ಪೌರಾಯುಕ್ತ ಜಗದೀಶ್ ಹುಲಗಜ್ಜಿ ಹಾಗೂ ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು , ಜಿಲ್ಲಾ ಮಟ್ಟದ ಜಾಗೃತ ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
https://www.youtube.com/watch?v=nmzZlatqJxg