More

    ‘ಯುವ’ರಾಜನ ಅರಸಿಯಾದ ಸಪ್ತಮಿ ಗೌಡ; ಹೊಂಬಾಳೆ ಫಿಲಂಸ್​ನಿಂದ ಘೋಷಣೆ

    ಬೆಂಗಳೂರು: ಯುವ ರಾಜಕುಮಾರ್ ಅಭಿನಯದ ಮೊದಲ ಚಿತ್ರ ‘ಯುವ’ಗೆ ನಾಯಕಿ ಯಾರಾಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಆ ಕುತೂಹಲಕ್ಕೆ ತೆರೆ ಬಿದ್ದಿದ್ದು, ಚಿತ್ರಕ್ಕೆ ನಾಯಕಿಯಾಗಿ ಸಪ್ತಮಿ ಗೌಡ ಅವರ ಹೆಸರನ್ನು ಹೊಂಬಾಳೆ ಫಿಲಂಸ್​ ಘೋಷಿಸಿದೆ.

    ಇದನ್ನೂ ಓದಿ: ಶೂಟಿಂಗ್ ವೇಳೆ ನಟ ಅಮಿತಾಭ್ ಬಚ್ಚನ್​ಗೆ ಗಾಯ; ಆಸ್ಪತ್ರೆಗೆ ದಾಖಲು

    ಯುವ ರಾಜಕುಮಾರ್ ಅಭಿನಯದ ಮೊದಲ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಚಿತ್ರದ ಮುಹೂರ್ತ ಮೊನ್ನೆಯಷ್ಟೇ ಬೆಂಗಳೂರು ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ವಿಜೃಂಭಣೆಯಿಂದ ಜರುಗಿದೆ. ಈ ಸಮಾರಂಭದಲ್ಲಿ ಚಿತ್ರದ ನಿರ್ಮಾಪಕರಾದ ವಿಜಯ್ ಕಿರಗಂದೂರು, ನಿರ್ದೇಶಕ ಸಂತೋಷ್ ಆನಂದ್‌ರಾಮ್, ಯುವ ರಾಜಕುಮಾರ್ ಹಾಗೂ ಡಾ. ರಾಜ್​ ಕುಟುಂಬದ ಕುಟುಂಬದ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಚಿತ್ರತಂಡದವರು ನಾಯಕಿಯ ಯಾರು ಎಂಬ ವಿಷಯವನ್ನು ಬಹಿರಂಗಪಡಿಸಿರಲಿಲ್ಲ.

    ಆದರೆ, ಸೋಮವಾರ ಸಂಜೆ ಆ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ‘ಯುವ’ರಾಜನ ಅರಸಿಯಾಗಿ ಸಪಸ್ತಮಿ ಗೌಡ ಚಿತ್ರತಂಡಕ್ಕೆ ಬಂದಿದ್ದಾರೆ ಎಂದು ನಿರ್ಮಾಣ ಸಂಸ್ಥೆ ಘೋಷಿಸಿದೆ. ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದ ಮೂಲಕ ಸಪ್ತಮಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರೂ, ಅವರಿಗೆ ದೊಡ್ಡ ಬ್ರೇಕ್​ ಸಿಕ್ಕಿದ್ದು ಹೊಂಬಾಳೆ ಫಿಲಂಸ್​ನ ‘ಕಾಂತಾರ’ ಚಿತ್ರದಿಂದ. ಈಗ ಅದೇ ಸಂಸ್ಥೆಯ ಇನ್ನೊಂದು ಚಿತ್ರಕ್ಕೂ ಸಪ್ತಮಿ ನಾಯಕಿಯಾಗಿದ್ದಾರೆ.

    ಇದನ್ನೂ ಓದಿ: ತಂದೆಯಿಂದಲೇ ಲೈಂಗಿಕ ದೌರ್ಜನ್ಯ: ಬಾಲ್ಯದ ಕಹಿ ಘಟನೆಯನ್ನು ಬಿಚ್ಚಿಟ್ಟ ಖುಷ್ಬೂ ಸುಂದರ್

    ‘ಯುವ’ ಚಿತ್ರಕ್ಕೆ ಸಂತೋಷ್​ ಆನಂದರಾಮ್​ ಕಥೆ-ಚಿತ್ರಕಥೆ ಬರೆಯುವುದರ ಜತೆಗೆ ನಿರ್ದೇಶನ ಮಾಡಲಿದ್ದು, ಅಜನೀಶ್ ಬಿ ಲೋಕನಾಥ್ ಸಂಗೀತ ಮತ್ತು ಶ್ರೀಶ ಕೂದುವಳ್ಳಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ‘ಯುವ’ ಚಿತ್ರವು ಡಿ. 22ರಂದು ಬಿಡುಗಡೆಯಾಗಲಿದೆ.

    ಕೊನೆಗೂ ನಿಜವಾಯ್ತು ಸುದ್ದಿ; ‘ಎನ್​ಟಿಆರ್​ 30’ ಚಿತ್ರದಲ್ಲಿ ಜಾಹ್ನವಿ ಕಪೂರ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts