ಬೆಂಗಳೂರು: ಯುವ ರಾಜಕುಮಾರ್ ಅಭಿನಯದ ಮೊದಲ ಚಿತ್ರ ‘ಯುವ’ಗೆ ನಾಯಕಿ ಯಾರಾಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಆ ಕುತೂಹಲಕ್ಕೆ ತೆರೆ ಬಿದ್ದಿದ್ದು, ಚಿತ್ರಕ್ಕೆ ನಾಯಕಿಯಾಗಿ ಸಪ್ತಮಿ ಗೌಡ ಅವರ ಹೆಸರನ್ನು ಹೊಂಬಾಳೆ ಫಿಲಂಸ್ ಘೋಷಿಸಿದೆ.
ಇದನ್ನೂ ಓದಿ: ಶೂಟಿಂಗ್ ವೇಳೆ ನಟ ಅಮಿತಾಭ್ ಬಚ್ಚನ್ಗೆ ಗಾಯ; ಆಸ್ಪತ್ರೆಗೆ ದಾಖಲು
ಯುವ ರಾಜಕುಮಾರ್ ಅಭಿನಯದ ಮೊದಲ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಚಿತ್ರದ ಮುಹೂರ್ತ ಮೊನ್ನೆಯಷ್ಟೇ ಬೆಂಗಳೂರು ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ವಿಜೃಂಭಣೆಯಿಂದ ಜರುಗಿದೆ. ಈ ಸಮಾರಂಭದಲ್ಲಿ ಚಿತ್ರದ ನಿರ್ಮಾಪಕರಾದ ವಿಜಯ್ ಕಿರಗಂದೂರು, ನಿರ್ದೇಶಕ ಸಂತೋಷ್ ಆನಂದ್ರಾಮ್, ಯುವ ರಾಜಕುಮಾರ್ ಹಾಗೂ ಡಾ. ರಾಜ್ ಕುಟುಂಬದ ಕುಟುಂಬದ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಚಿತ್ರತಂಡದವರು ನಾಯಕಿಯ ಯಾರು ಎಂಬ ವಿಷಯವನ್ನು ಬಹಿರಂಗಪಡಿಸಿರಲಿಲ್ಲ.
ಆದರೆ, ಸೋಮವಾರ ಸಂಜೆ ಆ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ‘ಯುವ’ರಾಜನ ಅರಸಿಯಾಗಿ ಸಪಸ್ತಮಿ ಗೌಡ ಚಿತ್ರತಂಡಕ್ಕೆ ಬಂದಿದ್ದಾರೆ ಎಂದು ನಿರ್ಮಾಣ ಸಂಸ್ಥೆ ಘೋಷಿಸಿದೆ. ‘ಪಾಪ್ಕಾರ್ನ್ ಮಂಕಿ ಟೈಗರ್’ ಚಿತ್ರದ ಮೂಲಕ ಸಪ್ತಮಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರೂ, ಅವರಿಗೆ ದೊಡ್ಡ ಬ್ರೇಕ್ ಸಿಕ್ಕಿದ್ದು ಹೊಂಬಾಳೆ ಫಿಲಂಸ್ನ ‘ಕಾಂತಾರ’ ಚಿತ್ರದಿಂದ. ಈಗ ಅದೇ ಸಂಸ್ಥೆಯ ಇನ್ನೊಂದು ಚಿತ್ರಕ್ಕೂ ಸಪ್ತಮಿ ನಾಯಕಿಯಾಗಿದ್ದಾರೆ.
ಇದನ್ನೂ ಓದಿ: ತಂದೆಯಿಂದಲೇ ಲೈಂಗಿಕ ದೌರ್ಜನ್ಯ: ಬಾಲ್ಯದ ಕಹಿ ಘಟನೆಯನ್ನು ಬಿಚ್ಚಿಟ್ಟ ಖುಷ್ಬೂ ಸುಂದರ್
‘ಯುವ’ ಚಿತ್ರಕ್ಕೆ ಸಂತೋಷ್ ಆನಂದರಾಮ್ ಕಥೆ-ಚಿತ್ರಕಥೆ ಬರೆಯುವುದರ ಜತೆಗೆ ನಿರ್ದೇಶನ ಮಾಡಲಿದ್ದು, ಅಜನೀಶ್ ಬಿ ಲೋಕನಾಥ್ ಸಂಗೀತ ಮತ್ತು ಶ್ರೀಶ ಕೂದುವಳ್ಳಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ‘ಯುವ’ ಚಿತ್ರವು ಡಿ. 22ರಂದು ಬಿಡುಗಡೆಯಾಗಲಿದೆ.
ಕೊನೆಗೂ ನಿಜವಾಯ್ತು ಸುದ್ದಿ; ‘ಎನ್ಟಿಆರ್ 30’ ಚಿತ್ರದಲ್ಲಿ ಜಾಹ್ನವಿ ಕಪೂರ್