ಸಂಡೂರು: ಕೇಂದ್ರ ಸರ್ಕಾರದ ಕೆಐಓಸಿಎಲ್ (ಕುದುರೆಮುಖ) ಗಣಿ ಕಂಪನಿಯಲ್ಲಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಿಕೊಡಬೇಕು ಎಂದು ಲಕ್ಷ್ಮೀಪುರದ ಯೋಜನಾ ಕಚೇರಿ ವ್ಯವಸ್ಥಾಪಕ ರಾಮಕೃಷ್ಣ ಕೋನಾರಿ ಅವರಿಗೆ ಕರವೇ ಕಾರ್ಯಕರ್ತರು ಸೋಮವಾರ ಮನವಿ ಸಲ್ಲಿಸಿದರು.
ಇದನ್ನು ಓದಿ: ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಿ
ನಂತರ ಮಾತನಾಡಿದ ತಾಲೂಕು ಅಧ್ಯಕ್ಷ ಸತ್ಯನಾರಾಯಣ ಮಾಸ್ತಿ, ಕಂಪನಿಯಲ್ಲಿ ನಡೆಯಲಿರುವ ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯರಿಗೆ ಪ್ರಥಮ ಆದ್ಯತೆ ನೀಡಬೇಕು.
ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂಬ ಸರೋಜಿನಿ ಮಹಿಷಿ ವರದಿಯನ್ನು ತಪ್ಪದೆ ಪಾಲಿಸಬೇಕು ಎಂದರು.