ಕೋಟೆ ಆಂಜನೇಯ ಬ್ರಹ್ಮರಥೋತ್ಸವ

blank

ಸಾಸ್ವೆಹಳ್ಳಿ: ಹನುಮ ಜಯಂತಿ ನಿಮಿತ್ತ ಗ್ರಾಮದ ಐತಿಹಾಸಿಕ ಪ್ರಸಿದ್ಧ ಶ್ರೀ ಕೋಟೆ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಮಂಗಳವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.

ಭಾನುವಾರ ಸ್ವಾಮಿಗೆ ಕಂಕಣಧಾರಣೆ ಮಾಡಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಸೋಮವಾರ ಬೆಳಗ್ಗೆ ಉಚ್ಚಾಯ ಉತ್ಸವ, ಮಂಗಳವಾರ ಬೆಳಗ್ಗೆಯಿಂದಲೇ ಶಿಲಾಮೂರ್ತಿ ಮತ್ತು ಉತ್ಸವ ಮೂರ್ತಿಗೆ ವಿಶೇಷ ಪೂಜಾ ಕೈಂಕರ್ಯ ಮತ್ತು ಹೋಮ ಹವನಗಳು ಪುರೋಹಿತ ತಂಡದಿಂದ ನೆರವೇರಿದವು.

ಗ್ರಾಮದ ಕೆಲವು ಪ್ರಮುಖ ಬೀದಿಗಳಲ್ಲಿ ಆಂಜನೇಯ, ನರಸಿಂಹ ಹಾಗೂ ಕಲ್ಲೇಶ್ವರ ಸ್ವಾಮಿಯ ಉತ್ಸವ ಮೂರ್ತಿಗಳ ಮೆರವಣಿಗೆ ವಾದ್ಯ ತಂಡದೊಂದಿಗೆ ಸಾಗಿತು. ಗ್ರಾಮದ ಪದ್ಧತಿಯಂತೆ ಸಂಜೆ ಉತ್ಸವಮೂರ್ತಿಗಳನ್ನು ಇಲ್ಲಿನ ವೈಷ್ಣವ ಸಮಾಜದವರ ಮನೆಗೆ ಕರೆದೊಯ್ದು ಪ್ರಸಾದ ನೈವೇದ್ಯ ಅರ್ಪಣೆ ಕಾರ್ಯ ನೆರವೇರಿತು.

ಬಳಿಕ ಉತ್ಸವ ಮೂರ್ತಿಗಳನ್ನು ದೇಗುಲದ ಆವರಣಕ್ಕೆ ಕರೆತಂದು ರಥದ ಮೇಲೆ ಕೂರಿಸಿ, ತೇರಿಗೆ ಪೂಜೆ ಸಲ್ಲಿಸಿ ತೇರಿಗೆ ಚಾಲನೆ ನೀಡಲಾಯಿತು. ದೇವಾಲಯದ ಆವರಣದಿಂದ ರಾಜಬೀದಿಯ ಕಲ್ಲೇಶ್ವರ ಸ್ವಾಮಿ ದೇಗುಲದವರೆಗೂ ಎಳೆದು, ಸ್ವಸ್ಥಾನಕ್ಕೆ ತರಲಾಯಿತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

Share This Article

ಮನೆಯಲ್ಲೇ ಗಟ್ಟಿ ಮೊಸರು ಮಾಡುವ ವಿಧಾನ ನಿಮಗೆ ತಿಳಿದಿದೆಯೇ; ಇಲ್ಲಿದೆ ಸಿಂಪಲ್ ಟ್ರಿ​ಕ್ಸ್​​​​​ | Health Tips

ಚಳಿಗಾಲವಿರಲಿ, ಬೇಸಿಗೆಯಿರಲಿ ಮೊಸರನ್ನು ಇಷ್ಟಪಡುವವರು ಹವಾಮಾನ ಬದಲಾದಾಗಲೂ ಅದನ್ನು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಚಳಿ ಹೆಚ್ಚಾದಾಗಲೂ ಅನೇಕರು…

ಊಟದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ; ಮಾಹಿತಿ ತಿಳಿದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಪ್ಪಿಸಿ | Health Tips

ಮಧುಮೇಹವು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. WHO ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.…

ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್‌ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker

Pressure Cooker : ಪ್ರೆಶರ್​ ಕುಕ್ಕರ್ ಇಂದು ಪ್ರತಿ ಮನೆಗಳಲ್ಲೂ ಅಗತ್ಯವಿರುವ ಅಡುಗೆ ಸಲಕರಣೆಗಳಲ್ಲಿ ಒಂದಾಗಿದೆ.…