More

    ಇನ್ನು ಮುಂದೆ ಶನಿವಾರ, ಭಾನುವಾರ ಎರಡೂ ದಿನ ಲಾಕ್‌ಡೌನ್: ಗೋವಿಂದ ಕಾರಜೋಳ

    ನಿಪ್ಪಾಣಿ: ಕರೊನಾ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ರಾಜ್ಯದೆಲ್ಲೆಡೆ ವಾರಕ್ಕೆರಡು ದಿನ ಲಾಕ್‌ಡೌನ್ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಹೇಳಿದ್ದಾರೆ.

    ನಿಪ್ಪಾಣಿಯಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಜನರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಮಾಡಲಾಗುತ್ತಿದೆ. ಆದರೆ ಈ ಕುರಿತು ಅಂತಿಮವಾಗಿ ಅಧಿಸೂಚನೆ ಹೊರಡಿಸುವ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

    ಈ ಮಧ್ಯೆ, ವಾರಕ್ಕೆರಡು ದಿನಗಳ ಕಾಲ ಲಾಕ್‌ಡೌನ್ ಮಾಡುವ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಜ್ಞರ ಸ್ಪಷ್ಟ ಶಿಫಾರಸಿಗಾಗಿ ಕಾಯುತ್ತಿದ್ದಾರೆ. ಈ ಕುರಿತು ಸಚಿವರು ಮತ್ತು ಹಿರಿಯ ಅಧಿಕಾರಿಗಳ ಸಭೆ ನಡೆಸಿ ನಂತರ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿದೆ.

    ವಾರವಿಡೀ ಲಾಕ್‌ಡೌನ್‌ಗೆ ತಜ್ಞರ ಶಿಫಾರಸು: ಸಚಿವರು ಏನು ಹೇಳ್ತಾರೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts