ನವದೆಹಲಿ: ಇತ್ತಿಚಿಗೆ ಪುಲ್ವಾಮಾ ದಾಳಿ ಕುರಿತು ಹೇಳಿಕೆ ನಿಡಿದ ಸುದ್ದಿಯಲ್ಲಿದ್ದ ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ.
ಜಮ್ಮು-ಕಾಶ್ಮೀರದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಬಹುಕೋಟಿ ಹಗರಣ
ಕಳೆದ ವರ್ಷ ಏಪ್ರಿಲ್ನಲ್ಲಿ ಮಲ್ಲಿಕ್ ಕಿರು ಹೈಡ್ರೋ ಎಲೆಕ್ಟ್ರಿಕ್ ಪವರ್ ಪ್ರಾಜೆಕ್ಟ್ ಹಾಗೂ ಸರ್ಕಾರಿ ನೌಕರರಿಗೆ ವಿಮಾ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಕುರಿತು ಮಲಿಕ್ ಆರೋಪಿಸಿದ್ದರು.
ಇದನ್ನೂ ಓದಿ: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್
ಮಲಿಕ್ ಅವರು ಮಾಡಿರುವ ಆರೋಪಗಳ ಕುರಿತು ಸ್ಪಷ್ಟನೆ ನೀಡುವಂತೆ ಮತ್ತು ಸಾಕ್ಷ್ಯಾಧಾರಗಳಿದ್ದಲ್ಲಿ ಒದಗಿಸುವಂತೆ ಕೇಳಲಾಗಿದೆ. ಇತ್ತೀಚಿಗೆ ಖಾಸಗಿ ಸು್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಲಿಕ್ ಭ್ರಷ್ಟಾಚಾರದ ವಿರುದ್ದ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯಾವುದೇ ಒಲವಿಲ್ಲ ಎಂದು ಆರೋಪಿಸಿದ್ದರು.
ನಾನು ಸತ್ಯದ ಪರ ನಿಲ್ಲುತ್ತೇನೆ
ಈ ಕುರಿತು ಪ್ರತಿಕ್ರಿಯಿಸಿರುವ ಮಲಿಕ್ ನನಗೆ ಯಾವುದೇ ನೋಟಿಸ್ ನೀಡಿಲ್ಲ. ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡುವಂತೆ ತಿಳಿಸಲಾಗಿದೆ. ಏಪ್ರಿಲ್ 28ರಂದು ದೆಹಲಿಯಲ್ಲಿರುವ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ಧಾರೆ.
ನಾನು ಸತ್ಯವನ್ನು ಹೇಳುವ ಮೂಲಕ ಕೆಲವರ ಪಾಪವನ್ನು ಬಯಲಿಗೆಳೆದಿದ್ದೇನೆ. ಬಹುಶಃ ಅದಕ್ಕಾಗಿಯೇ ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ. ನಾನು ರೈತನ ಮಗನಾಗಿದ್ದು ಸತ್ಯದ ಪರ ನಿಲ್ಲುತ್ತೇನೆ ಎಂದು ಸತ್ಯಪಾಲ್ ಮಲಿಕ್ ಹೇಳಿದ್ದಾರೆ.