ಕೋಲ್ಕತ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿಗೆ ಶನಿವಾರ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 48 ವರ್ಷದ ಗಂಗೂಲಿ ಆರೋಗ್ಯ ಸ್ಥಿರವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯ ತುರ್ತುವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ಸಂಜೆ ಎಂದಿನಂತೆ ದೈಹಿಕ ಕಸರತ್ತಿನಲ್ಲಿ ತೊಡಗಿದ್ದ ವೇಳೆ ಗಂಗೂಲಿಗೆ ಎದೆನೋವು ಕಾಣಿಸಿಕೊಂಡಿತ್ತು. ಬಳಿಕ ಕುಟುಂಬ ಸದಸ್ಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ: ನಿವೃತ್ತಿ ಮಾತು ಸದ್ಯಕ್ಕಿಲ್ಲ ಎಂದ ಯುನಿವರ್ಸಲ್ ಬಾಸ್
‘ಸದ್ಯ ಗಂಗೂಲಿ ಕ್ಷೇಮವಾಗಿದ್ದಾರೆ. ಹೃದಯಾಘಾತದಿಂದ ಅಥವಾ ಇನ್ನಿತರ ಸಮಸ್ಯೆಯಿಂದ ಅವರಿಗೆ ಎದೆ ನೋವು ಕಾಣಿಸಿಕೊಂಡಿರುವ ಕುರಿತು ವಿವಿಧ ಪರೀಕ್ಷೆಗಳ ಮೂಲಕ ತಿಳಿಯಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮತ್ತೊಂದು ವರದಿಯ ಪ್ರಕಾರ ಗಂಗೂಲಿ ಹೃದಯಾಘಾತಕ್ಕೆ ಒಳಗಾಗಿದ್ದು, ಶನಿವಾರ ಸಂಜೆ ಆಂಜಿಯೋಪ್ಲಾಸ್ಟಿಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ. ಸೌರವ್ ಗಂಗೂಲಿ ಬೇಗ ಗುಣಮುಖರಾಗಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.
Sad to hear that @SGanguly99 suffered a mild cardiac arrest and has been admitted to hospital.
Wishing him a speedy and full recovery. My thoughts and prayers are with him and his family!
— Mamata Banerjee (@MamataOfficial) January 2, 2021