ಬೆಂಗಳೂರು: ಹಿರಿಯ ನಟಿ ತಾರಾ ಅನರಾಧಾ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ಸಾವಿತ್ರಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. 45 ಕ್ಕೂ ಹೆಚ್ಚು ದಿನಗಳ ಕಾಲ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದ್ದು, ಸದ್ಯ ಪ್ರಸ್ತುತ ಸಂಕಲನ ಕಾರ್ಯ ಬಿರುಸಿನಿಂದ ಸಾಗಿದೆ.
ಇದನ್ನೂ ಓದಿ: ಓಟಿಟಿ ಮೇಲೆ ದರ್ಶನ್ ಗರಂ: ಅಂಬಾನಿ ವಿರುದ್ಧ ಗಂಭೀರ ಆರೋಪ ಮಾಡಿದ ದಚ್ಚು!
ಪಿ.ಎನ್.ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪ್ರಶಾಂತ್ ಕುಮಾರ್ ಮೂಲತಃ ಸಾಫ್ಟ್ ವೇರ್ ಉದ್ಯೋಗಿ. ಎಸ್ ದಿನೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ‘ಉಯ್ಯಾಲೆ’ ನಂತರ ಇದು ನಿರ್ದೇಶಕರಿಗೆ ಎರಡನೇ ಚಿತ್ರ.
ಖ್ಯಾತ ಸಾಹಿತಿ ಹೃದಯ ಶಿವ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಗೀತರಚನೆ ಹಾಗೂ ಸಂಭಾಷಣೆ ಕೂಡ ಹೃದಯ ಶಿವ ಅವರದ್ದೆ. ಇಷ್ಟು ದಿನ ಗೀತರಚನೆಕಾರರಾಗಿದ್ದ ಹೃದಯ ಶಿವ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿದ್ದಾರೆ. ನಾಗಾರ್ಜುನ ಡಿ ಛಾಯಾಗ್ರಹಣ ಹಾಗೂ ಮನು ಅವರ ಸಂಕಲನ ಈ ಚಿತ್ರಕ್ಕಿದೆ.
ಇದನ್ನೂ ಓದಿ: ಹುಟ್ಟುಹಬ್ಬದ ಆಚರಣೆಗೆ ಬ್ರೇಕ್ ಹಾಕಿ ನಟ ದರ್ಶನ್ ಅಭಿಮಾನಿಗಳಿಗೆ ನೀಡಿದ ಸಂದೇಶ ಹೀಗಿದೆ…
ಕೌಟುಂಬಿಕ ಹಾಗೂ ಹಾರರ್ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕರಾಗಿ ವಿಜಯ ರಾಘವೇಂದ್ರ ಅಭಿನಯಿಸಿದ್ದಾರೆ. ಊರ್ವಶಿ ರೈ ಈ ಚಿತ್ರದ ನಾಯಕಿ. ಪ್ರಕಾಶ್ ಬೆಳವಾಡಿ, ಸಂಜು ಬಸಯ್ಯ, ಬೇಬಿ ನೈಲಾ ಪ್ರಮೋದ್, ಸ್ವಾತಿ, ಮಾ. ಪುನೀತ್, ಮಾ. ಮಾನ್ವಿಕ್, ಮಾ. ಚಿನ್ಮಯ್, ಬೇಬಿ ಸಂಜನಾ ಹೃದಯಶಿವ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಶಿವರಾತ್ರಿಗೆ ಬರಲು ದರ್ಶನ್ ‘ರಾಬರ್ಟ್’ ರೆಡಿ; ಆದರೆ ಕನ್ನಡದಲ್ಲಷ್ಟೇ ಚಿತ್ರ ಬಿಡುಗಡೆ ಆಗಲಿದೆಯೇ?