More

    ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿ : ಹೊಲಕ್ಕಿಳಿದ ಕೆಎಸ್​ಆರ್​ಟಿಸಿ ಬಸ್​

    ಬಾಗಲಕೋಟೆ : ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಘಟನೆಗಳ ಪೈಕಿ ಒಂದು ಕಡೆ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದರೆ, ಮತ್ತೊಂದೆಡೆ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿ ಹೊಲದಲ್ಲಿ ಇಳಿದಿದೆ. ಅದೃಷ್ಟವಶಾತ್ ಎರಡೂ ಪ್ರಕರಣಗಳಲ್ಲಿ ಯಾವುದೇ ಜೀವ ಹಾನಿ ಉಂಟಾಗಿಲ್ಲ.

    ಗುಳೇದಗುಡ್ಡ ಪಟ್ಟಣದ ಭಂಡಾರಿ ಶಿಕ್ಷಣ ಸಂಸ್ಥೆಯ ಪೆಟ್ಸ್ ಅಂತಾರಾಷ್ಟ್ರೀಯ ಶಾಲೆ ಬಸ್ ಬೂದಿನಗಡ ಗ್ರಾಮದ ಬಳಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ಕೆಲ ಮಕ್ಕಳಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಾಗಲಕೋಟೆ ತಾಲೂಕಿನ ಶಿರೂರ ಪಟ್ಟಣದಿಂದ ಗುಳೇದಗುಡ್ಡಕ್ಕೆ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ.

    ಮತ್ತೊಂದೆಡೆ ಬೀಳಗಿ ತಾಲೂಕಿನ ಅನಗವಾಡಿ ಬಳಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ಹೊಲದಲ್ಲಿ ಇಳಿದಿದ್ದು, ಪ್ರಯಾಣಿಕರಿಗೆ ಯಾವುದೇ ಅಪಾಯ ಆಗಿಲ್ಲ. ಆದರೆ, ಬಸ್ ರಸ್ತೆಗೆ ತರಲು ಕ್ರೇನ್ ಮೂಲಕ ಕಾರ್ಯಾಚರಣೆ ನಡೆಸಿದ್ದರಿಂದ ಟ್ರಾಫಿಕ್ ಜಾಮ್ ಆಗಿ ಹೆದ್ದಾರಿಯಲ್ಲಿ ಒಂದು ಕಿ.ಮೀ.ವರೆಗೂ ವಾಹನಗಳು ನಿಂತಿದ್ದವು. ಕಾರ್ಯಾಚರಣೆ ನಂತರ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಪುನರಾರಂಭವಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts