ಪುಣೆ: ಮಕ್ಕಳಿಗೆ ಕ್ರೈಸ್ತ ಧರ್ಮದ ಪ್ರಾರ್ಥನೆಗಳನ್ನು ಓದಲು ಒತ್ತಾಯ ಮಾಡುತ್ತಿದ್ದ ಎಂಬ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲನಿಗೆ ಥಳಿಸಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಡಿ.ವಾಯ್. ಪಾಟೀಲ್ ಶಾಲೆಯ ಪ್ರಾಂಶುಪಾಲನಾಗಿರುವ ಅಲೆಕ್ಸಾಂಡರ್ ಮೇಲೆ ಹಲ್ಲೆ ನಡೆಸಲಾಗಿದ್ದು, ಮಕ್ಕಳಿಗೆ ಬಲವಂತವಾಗಿ ಕ್ರಿಶ್ಚಿಯನ್ ಪ್ರಾರ್ಥನೆ ಓದುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳ ಪೋಷಕರು ಆರೋಪಿಸಿದ ನಂತರ ಈ ಘಟನೆ ನಡೆದಿದೆ.
ಇದನ್ನೂ ಓದಿ: ಸದನದಲ್ಲಿ ಕೋಲಾಹಲ ಎಬ್ಬಿಸಿದ ಮಂಡ್ಯ ಚಾಲಕನ ಆತ್ಮಹತ್ಯೆ ಯತ್ನ ಕೇಸ್: ಸರ್ಕಾರಕ್ಕೆ ಎಚ್ಡಿಕೆ, ಬೊಮ್ಮಾಯಿ ಚಾಟಿ
ಹಲವಾರು ಪೋಷಕರು, ಹಿಂದೂ ಹಬ್ಬಗಳಿಗೆ ವಿದ್ಯಾರ್ಥಿಗಳಿಗೆ ರಜೆ ನೀಡಿಲ್ಲ ಮತ್ತು ಕ್ರಿಶ್ಚಿಯನ್ ಸಂಬಂಧಿತ ಪ್ರಾರ್ಥನೆಯನ್ನು ಓದುವಂತೆ ಮಕ್ಕಳಿಗೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಹಲವು ಹಿಂದೂ ಕಾರ್ಯಕರ್ತರು, ಹುಡುಗಿಯರ ವಾಶ್ ರೂಂನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಆದರೆ ಶಾಲೆಯ ಆಡಳಿತ ಮಂಡಳಿ ಈ ಎಲ್ಲ ಆರೋಪಗಳನ್ನು ನಿರಾಕರಿಸಿದ್ದು, ಪ್ರಾಂಶುಪಾಲನನ್ನು ಅಮಾನತುಗೊಳಿಸಿ ರಜೆ ಮೇಲೆ ಕಳುಹಿಸಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.(ಏಜೆನ್ಸೀಸ್)