ಹಳೇ ವಿದ್ಯಾರ್ಥಿಗಳಿಂದ ಶಾಲೆ ಏಳಿಗೆ

blank

ವಿಜಯವಾಣಿ ಸುದ್ದಿಜಾಲ ಕಾರ್ಕಳ

ವಿದ್ಯಾರ್ಥಿ, ಶಿಕ್ಷಕರ ಜತೆಯಲ್ಲಿ ಹಳೇ ವಿದ್ಯಾರ್ಥಿಗಳು, ಪಾಲಕರ ಮಾರ್ಗದರ್ಶನ, ಪ್ರೋತ್ಸಾಹ ದೊರೆತರೆ ಶಿಕ್ಷಣ ಸಂಸ್ಥೆಗಳು ಅಭಿವೃದ್ಧಿಯಾಗುತ್ತವೆ ಎಂದು ವೈದ್ಯೆ ಡಾ.ಅಕ್ಷತಾ ರೈ ಹೇಳಿದರು.

ಬೋಳ ಪಿಲಿಯೂರು ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹಳೇ ವಿದ್ಯಾರ್ಥಿ ಸಂಘ ಹಾಗೂ ಮಿತ್ರವೃಂದ ಆಶ್ರಯದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಾನಿಗಳನ್ನು, ಐವರು ಗೌರವ ಶಿಕ್ಷಕಿಯನ್ನು ಅಭಿನಂದಿಸಲಾಯಿತು. ಶಿಕ್ಷಣ ಹಾಗೂ ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ನಿಟ್ಟೆ ತಾಂತ್ರಿಕ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಶ್ಯಾಮ್ ಸುಂದರ್ ಎಂ., ಬೋಳ ಗ್ರಾಪಂ ಅಧ್ಯಕ್ಷ ಬಿ.ದಿನೇಶ್ ಪೂಜಾರಿ, ಬೋಳ ವಿಠಲ ಶೆಟ್ಟಿ ಫೌಂಡೇಶನ್‌ನ ಸುನೀಲ್ ಶೆಟ್ಟಿ, ಗ್ರಾಮ ಕರಣಿಕ ಸುದರ್ಶನ್ ಕಾಮತ್, ಪ್ರಮುಖರಾದ ಸುಧೀರ್ ದೇವಾಡಿಗ, ಸುಕುಮಾರ್ ಶೆಟ್ಟಿ, ಬಿ.ಪ್ರಕಾಶ್, ಹೂವಪ್ಪ, ಬೋಳ ದಾಮೋದರ ಕಾಮತ್, ಸದಾಶಿವ ಶೆಟ್ಟಿ, ಪ್ರದೀಪ್ ಶೆಟ್ಟಿ, ಬಿ.ಕೃಷ್ಣಮೂರ್ತಿ, ಸುಜಾತಾ ಶೇಖರ್ ಶೆಟ್ಟಿ ಉಪಸ್ಥಿತರಿದ್ದರು.

ಪುಂಡಲೀಕ ಎಸ್.ಪವಾರ್ ಸ್ವಾಗತಿಸಿದರು. ಗೀತಾ ವರದಿ ಮಂಡಿಸಿದರು. ಶಶಿಕಲಾ ಬಹುಮಾನಿತರ ಪಟ್ಟಿ ವಾಚಿಸಿದರು. ಜ್ಯೋತಿ ವಂದಿಸಿದರು. ಸತೀಶ್ ಶೆಟ್ಟಿ ಅಗ್ಗೊೃಟ್ಟು ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ, ಶಶಿಕಲಾ ಸಪಳಿಗ ಸಹಕರಿಸಿದರು.

ಫಲಾನುಭವಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ

ಸಂಘಟನೆಯಿಂದ ಸಮುದಾಯ ಬೆಳವಣಿಗೆ

 

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…