More

    ಸೋಮವಾರದಿಂದ ಶಾಲೆ ಆರಂಭ: ಕೆಲವು ಶಾಲೆಗಳಿಗೆ ಸಿಎಂ ಭೇಟಿ!

    ಬೆಂಗಳೂರು: ಕರೊನಾ ಮುಂಜಾಗ್ರತಾ ಕ್ರಮ ಕೈಗೊಂಡು ಸೋಮವಾರದಿಂದ ಶಾಲೆ ಆರಂಭಿಸಲಾಗುತ್ತಿದ್ದು, ಆ ಸಂದರ್ಭದಲ್ಲಿ ಬೆಂಗಳೂರಿನ ಕೆಲವು ಶಾಲೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್​​ ಅವರು ಭೇಟಿ ನೀಡಲಿದ್ದಾರೆ.

    ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಈ ವಿಷಯ ತಿಳಿಸಿದ್ದಾರೆ. 9ನೇ ತರಗತಿ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಸೋಮವಾರದಿಂದ ಆರಂಭವಾಗಲಿದೆ. ಇದಕ್ಕೆ ಸರ್ಕಾರದಿಂದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಿಕ್ಷಕರಿಗೆ ವ್ಯಾಕ್ಸಿನೇಷನ್‌ ಹಾಗೂ‌ ಶಾಲೆಗಳಿಗೆ ಸ್ಯಾನಿಟೈಜ್ ಮಾಡಲಾಗಿದೆ ಎಂದು ತಿಳಿಸಿದರು.

    ಇದನ್ನೂ ಓದಿ: ಇವರು ತಾಲಿಬಾನ್​ ಬಗ್ಗೆ ಪೋಸ್ಟ್​ ಮಾಡಿ, ಪೊಲೀಸರ ಅತಿಥಿಯಾದರು!

    ಪೋಷಕರ ಸಮ್ಮತಿಯನ್ನು ಪಡೆದು ಮಕ್ಕಳು ಶಾಲೆಗೆ ಬರತಕ್ಕದ್ದು. ಯಾವುದೇ ಆತಂಕ ಇಲ್ಲದೆ ಮಕ್ಕಳು ಶಾಲೆಗೆ ಬರಬಹುದು ಎಂದು ಹೇಳಿದ ಸಿಎಂ, ಪೋಷಕರು ಕೂಡ ಎಲ್ಲರೂ ಕರೊನಾ ಲಸಿಕೆ ಹಾಕಿಸಿಕೊಳ್ಳಬೇಕು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಂತ ಹಂತವಾಗಿ ಎಲ್ಲ ಶಾಲೆಗಳೂ ಆರಂಭವಾಗಲಿವೆ ಎಂದರು.

    ವರ್ಲ್ಡ್​​ ಅಥ್ಲೆಟಿಕ್ಸ್​​ನಲ್ಲಿ ಭಾರತಕ್ಕೆ ಎರಡನೇ ಪದಕ: ನಡಿಗೆ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದ ಅಮಿತ್​​ ಕುಮಾರ್​

    VIDEO| ಚಿನ್ನವನ್ನು ಹೇಗೆ ಮುಚ್ಚಿಟ್ಟುಕೊಂಡು ತಂದಿದ್ದಾರೆ… ಇಲ್ಲಿ ನೋಡಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts