More

    ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿ ಎಸ್‌ಡಿಪಿಐ ಪ್ರತಿಭಟನೆ

    ಮೈಸೂರು: ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಮುಗಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಎಸ್‌ಡಿಪಿಐ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

    ನಗರದ ಗಾಂಧಿ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆಸಿ ನೀಚ ಕೃತ್ಯಗಳನ್ನು ಚಿತ್ರೀಕರಣ ಮಾಡಿಕೊಂಡಿರುವ ದೂರುಗಳನ್ನು ಸಂತ್ರಸ್ತ ಮಹಿಳೆಯರೇ ನೀಡಿದ್ದಾರೆ. ಪ್ರಕರಣಗಳ ಸಂಖ್ಯೆ ಗಮನಿಸಿದರೆ ಇದು ದೇಶದ ಅತಿ ದೊಡ್ಡ ಸೆಕ್ಸ್ ಸ್ಕ್ಯಾಂಡಲ್ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ನೀಚ ಕೃತ್ಯದಲ್ಲಿ ಶಾಸಕ ರೇವಣ್ಣ ಅವರೂ ಭಾಗಿಯಾಗಿದ್ದಾರೆ. ಕೋಮು ದ್ವೇಷ ಹರಡುವ ಉದ್ದೇಶದಿಂದ ಹುಬ್ಬಳ್ಳಿಯ ನೇಹಾ ಅವರ ಪ್ರೇಮ ವೈಫಲ್ಯ ಕೊಲೆ ಪ್ರಕರಣವನ್ನು ಹಿಂದು, ಮುಸ್ಲಿಂ ಗಲಭೆಯಂತೆ ಬಿಂಬಿಸಿ ರಾದ್ಧಾಂತ ಮಾಡಿದ ನರೇಂದ್ರ ಮೋದಿ ಅವರು ಈ ಬಗ್ಗೆ ಒಂದೇ ಒಂದು ಮಾತನ್ನೂ ಆಡಿಲ್ಲ. ಪ್ರಕರಣದಲ್ಲಿ ನೊಂದಿರುವ ಹೆಣ್ಣು ಮಕ್ಕಳು ಹಿಂದುಗಳಲ್ಲವೇ ಎಂದು ಕಿಡಿಕಾರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts