More

    ಮತ ಎಣಿಕೆ ಹಿನ್ನೆಲೆಯಲ್ಲಿ ನಾಳೆ ಸೆಕ್ಷನ್​ 144 ಜಾರಿ; ಯಾವುದಕ್ಕೆಲ್ಲ ವಿನಾಯಿತಿ?

    ಬೆಂಗಳೂರು: ನಾಳೆ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಸೆಕ್ಷನ್​ 144 ಜಾರಿ ಆಗಲಿದೆ.

    ನಾಳೆ ಬೆಳಗ್ಗೆ 8 ಗಂಟೆಯಿಂದ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಪ್ರಾರಂಭವಾಗಲಿದ್ದು ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದ ಸುತ್ತಮುತ್ತ 144ಸೆಕ್ಷನ್ ಜಾರಿಯಾಗಲಿದೆ.

    ಬೆಂಗಳೂರಿನಲ್ಲಿ ಮೇ.13ರಂದು ಬೆಳಿಗ್ಗೆ 6ರಿಂದ ನಿಷೇಧಾಜ್ಞೆ ಜಾರಿಯಾಗಲಿದ್ದು ಐವರಿಗಿಂತ ಹೆಚ್ಚು ಜನರ ಗುಂಪು ಸೇರುವಂತಿಲ್ಲ. ಮದುವೆ, ಶವಸಂಸ್ಕಾರಕ್ಕೆ ಹೊರತುಪಡಿಸಿ, ಉಳಿದೆಲ್ಲವಕ್ಕೂ ಪ್ರತಿಭಂದಕಾಜ್ಞೆ ಅನ್ವಯಿಸಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts