More

    ಶಿವಮೊಗ್ಗದಲ್ಲಿ ನಾಳೆಯಿಂದ ಶಾಲಾ-ಕಾಲೇಜು ಓಪನ್; ನಿಷೇಧಾಜ್ಞೆ ಮುಂದುವರಿಕೆ

    ಶಿವಮೊಗ್ಗ: ನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಞೆಯನ್ನು ಮಾರ್ಚ್ 4ರ ವರೆಗೆ ಮುಂದುವರಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

    ನಿಷೇಧಾಜ್ಞೆ ಅವಧಿಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ. ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ನಾಳೆಯಿಂದ ಶಾಲಾ – ಕಾಲೇಜುಗಳು ಸಹ ಪುನಾರಂಭಗೊಳ್ಳುತ್ತಿವೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಶಿವಮೊಗ್ಗ ನಗರದಲ್ಲಿ ಮುಂದುವರಿಸಲಾಗಿದೆ.

    ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಬಳಿಕ ನಗರದಲ್ಲಿ ಬಿಗುವಿನ ವಾತಾವರಣ ಮುಂದುವರಿದಿತ್ತು, ಅಂತಿಮ ಯಾತ್ರೆ ಮೆರವಣಿಗೆ ವೇಳೆ ಉದ್ರಿಕ್ತರ ಗುಂಪು ಬೈಕ್​ಗೆ ಬೆಂಕಿ ಹಚ್ಚಿ, ಕಾರುಗಳ ಗಾಜನ್ನು ಪುಡಿಪುಡಿ ಮಾಡಿದ್ದರು. ಹರ್ಷನ ಹತ್ಯೆ ನಂತರ ನಡೆದ ಗಲಭೆ ಪರಿಣಾಮನವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಅಹಿತಕರ ಘಟನೆ ನಡೆಯದಂತೆ ಅದನ್ನು ಮುಂದುವರಿಸಲಾಗಿದೆ.

    ‘ಎಲ್ಲವೂ ಮಂಜುಗಡ್ಡೆಯಂತೆ ಕರಗುತ್ತೆ, ಒಬ್ಬ ಮಾತ್ರ ಗಟ್ಟಿಯಾಗಿದ್ದು, ವಿಶ್ವವನ್ನೇ ಆಳ್ತಾನೆ!’ ನಿಜವಾಗ್ತಿದ್ಯಾ ವಾಂಗಾ ಭವಿಷ್ಯ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts