ದಾವಣಗೆರೆ: ವಿಜಯಸಂಕಲ್ಪ ಯಾತ್ರೆ ಮಹಾಸಂಗಮದ ನಿಮಿತ್ತ ಇಂದು ದಾವಣೆಗೆರೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿದ್ದ ವೇಳೆ ಭದ್ರತಾ ಲೋಪವಾಗಿದ್ದು ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆಯಲಾಗಿದೆ.
ವಿಡಿಯೋದಲ್ಲಿ ಕಂಡು ಬರುವ ಹಾಗೆ ವ್ಯಕ್ತಿಯೋರ್ವ ಬೆಂಗಾವಲು ಪಡೆಯತ್ತ ಓಡಿ ಹೋಗಲು ಯತ್ನಿಸುತ್ತಾರೆ. ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಕೂಡಲೇ ಆ ವ್ಯಕ್ತಿಯನ್ನ ತಡೆದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ: ಡಬಲ್ ಇಂಜಿನ್ ಸರ್ಕಾರ ಮತ್ತೆ ಅಧಿಕಾರಕ್ಕೆ ತರಲು ಕರ್ನಾಟಕ ಜನತೆಯಿಂದ ನಿರ್ಧಾರ: ಪ್ರಧಾನಿ ಮೋದಿ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಬಂಧಿತ ವ್ಯಕ್ತಿಯೂ ಕೊಪ್ಪಳ ಮೂಲದ ಬಸವರಾಜ್ ಕಾಟಗಿ ಎಂದು ಗುರತು ಹಿಡಿಯಲಾಗಿದ್ದು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಜನಸ್ತೋಮ ಹೆಚ್ಚಿದ ಕಾರಣ ಬ್ಯಾರಿಕೇಡ್ಗಳ ಮೂಲಕ ಹಾರಿ ಬಂದಿದ್ದಾರೆ. ಈ ರೀತಿಯ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕ ಕ್ರಮಗಳನ್ನ ವಹಿಸಲಾಗುವುದು ಎಂದು ತಿಳಿಸಿದ್ದಾರೆ.