ಇನ್ನೇನು ನಿಶ್ಚಿತಾರ್ಥ ನಡೆಯಬೇಕು… ಅಷ್ಟರಲ್ಲಿ ಬಂದ ಜವರಾಯ ಅಕ್ಕ-ತಂಗಿಯ ಪ್ರಾಣ ಹೊತ್ತೊಯ್ದ!

ತುಮಕೂರು: ಮಗಳ ಮದುವೆ ತಯಾರಿಯ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಶೋಕ ಆವರಿಸಿದೆ. ಮದುಮಗಳು ಆಗಬೇಕಿದ್ದ ಯುವತಿ ಮತ್ತು ಆಕೆಯ ಸಹೋದರಿ ಇಬ್ಬರೂ ದುರ್ಮರಣಕ್ಕೀಡಾಗಿದ್ದು, ಮಕ್ಕಳನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲುಮುಟ್ಟಿದೆ. ಹೌದು, ಇಂತಹದ್ದೊಂದು ದುರಂತ ಸಾವು ಶಿರಾ ತಾಲೂಕು ಕಳ್ಳಂಬೆಳ್ಳ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ. ಶಿಲ್ಪಾ(18) ಮತ್ತು ಸುಶ್ಮಿತಾ(16) ಸಾವಿಗೀಡಾಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ಹಾಗಿದ್ದರೆ ಇಂದು(ಭಾನುವಾರ) ಶಿಲ್ಪಾಳ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿದು ಮದುವೆ ಸಂಭ್ರಮ ಕಳೆಗಟ್ಟಬೇಕಿತ್ತು. ವಿಧಿಯಾಟಕ್ಕೆ ಸಿಕ್ಕ ಮನೆಯಲ್ಲೀಗ ಸೂತಕದ ಕಾರ್ಮೋಡ ಕವಿದಿದೆ. … Continue reading ಇನ್ನೇನು ನಿಶ್ಚಿತಾರ್ಥ ನಡೆಯಬೇಕು… ಅಷ್ಟರಲ್ಲಿ ಬಂದ ಜವರಾಯ ಅಕ್ಕ-ತಂಗಿಯ ಪ್ರಾಣ ಹೊತ್ತೊಯ್ದ!