More

    ಹಿರಿಯ ನಟ ದ್ವಾರಕೀಶ್ ಸಾವಿನ ಬಗ್ಗೆ ಸುಳ್ಳು ಸುದ್ದಿ; ನಗುನಗುತ್ತಾ ಗಟ್ಟಿಮುಟ್ಟಾಗಿದ್ದೇನೆಂದು ಸ್ಪಷ್ಟನೆ ನೀಡಿದ ನಟ!

    ಬೆಂಗಳೂರು: ಹಿರಿಯ ನಟ ದ್ವಾರಕೀಶ್ ನಿಧನ ಎನ್ನುವ ಸುದ್ದಿ ವೈರಲ್ ಆಗಿತ್ತು. ಈ ಬಗ್ಗೆ ಸ್ವತಃ ದ್ವಾರಕೀಶ್ ಅವರೇ ಪ್ರತಿಕ್ರಿಯೆ ನೀಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

    ಮುಂಜಾನೆಯಿಂದಲೂ ಫೇಸ್‌ಬುಕ್‌, ವಾಟ್ಸ್‌ಅಪ್‌ಗಳಲ್ಲಿ ನಟ ದ್ವಾರಕೀಶ್ ಸಾವಿನ ಸುಳ್ಳು ಸುದ್ದಿ ಹರಿದಾಡುತ್ತಿದೆ. ಸುದ್ದಿಯನ್ನು ಪರಿಶೀಲಿಸದೆ ಅನೇಕರು ಪ್ರತಿಕ್ರಿಯಿಸುತ್ತಿದ್ದಾರೆ. ಸ್ವತಃ ದ್ವಾರಕೀಶ್ ಅವರೇ ಸಾವಿನ ಸುದ್ದಿ ವದಂತಿಗೆ ಬ್ರೇಕ್ ಹಾಕಿದ್ದಾರೆ.

    ದ್ವಾರಕೀಶ್ ಹೇಳಿದ್ದೇನು?: ನಮಸ್ಕಾರ…ನಾನು ದ್ವಾರಕೀಶ್, ನೀವು ಸಾಕಿ, ಬೆಳೆಸಿದ ದ್ವಾರಕೀಶ್, ದ್ವಾರಕೀಶ್..ಚೆನ್ನಾಗಿದ್ದೀನಿ. ನಿಮ್ಮೆಲ್ಲರ ಆಶೀರ್ವಾದ ನನಗೆ ಬೇಕು. ಗಟ್ಟಿಮುಟ್ಟಾಗಿದ್ದೀನಿ. ಯಾವುದೇ ಚಿಂತೆ ಇಲ್ಲ. ನಗ್ತಾ ಇದ್ದೀನಿ. ನಿಮ್ಮ ಪ್ರೀತಿ, ವಿಶ್ವಾಸ ಹೀಗೆ ಇರಲಿ. ನಿಮ್ಮೆಲ್ಲರ ಆಶೀರ್ವಾದ ಇರೋವರೆಗೂ ನನಗೆ ಏನು ಆಗಲ್ಲ’ ಎಂದು ದ್ವಾರಕೀಶ್ ಹೇಳಿದ್ದಾರೆ.

    ಇದನ್ನೂ ಓದಿ: ಡೆತ್ ನೋಟ್ ಬರೆದಿಟ್ಟು ಏಳನೇ ಮಹಡಿ ಕಟ್ಟಡದಿಂದ ಹಾರಿ ಪ್ರಾಣ ಬಿಟ್ಟ ವಿದ್ಯಾರ್ಥಿನಿ

    ಈ ವಿಡಿಯೋ ಮೂಲಕ ವದಂತಿಗೆ ದ್ವಾರಕೀಶ್ ಅವರ ಸಾವಿನ ಕುರಿತಾಗಿ ಹಬ್ಬುತ್ತಿದ್ದ ಸುಳ್ಳು ಸುದ್ದಿಗೆ ಸ್ಪಷ್ಟನೆ ನೀಡಿದ್ದಾರೆ. ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದು, ನಟನ ಆರೋಗ್ಯ ಕಾಪಾಡಿಕೊಳ್ಳುವಂತೆ ಕಾಮೆಂಟ್​​ ಮಾಡುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts