More

    ಮೊಬೈಲ್​ನಿಂದ ಮಕ್ಕಳ ಮೇಲಾಗುವ ಪರಿಣಾಮಗಳೇನು?; ‘ಸಾವಿತ್ರಿ’ ಸಿನಿಮಾ ಮೂಲಕ ಹೇಳಲಿದ್ದಾರೆ ನಟಿ ತಾರಾ

    ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮೂರು ದಶಕಗಳಿಂದ ವಿವಿಧ ಪಾತ್ರಗಳಲ್ಲಿ ಅಭಿನಯಿಸಿ ಜನಮನಸೂರೆಗೊಂಡಿರುವ ನಟಿ ತಾರಾ. ಈಗ ಅವರು ‘ ಸಾವಿತ್ರಿ ‘ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ನವೆಂಬರ್‌ 19 ರಿಂದ ಆರಂಭವಾಗಲಿದ್ದು, ಬೆಂಗಳೂರು ಸುತ್ತಮುತ್ತ 45 ದಿನಗಳ ಚಿತ್ರೀಕರಣ ನಡೆಯಲಿದೆ.

    ಇದನ್ನೂ ಓದಿ: ಹಿರಿಯ ನಟ ದತ್ತಣ್ಣ ಅವರ ಸಹೋದರ ಸೋಮಣ್ಣ ನಿಧನ

    ಪಿ.ಎನ್.ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ (ಹೀಲಲ್ಲಿಗೆ) ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪ್ರಶಾಂತ್ ಕುಮಾರ್ ಮೂಲತಃ ಸಾಫ್ಟ್ ವೇರ್ ಉದ್ಯೋಗಿ. ಎಸ್ ದಿನೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ‌ ಮಾಡುತ್ತಿದ್ದಾರೆ. ‘ಉಯ್ಯಾಲೆ’ ನಂತರ ಇದು ನಿರ್ದೇಶಕರಿಗೆ ಎರಡನೇ ಚಿತ್ರ.

    ಮೊಬೈಲ್​ನಿಂದ ಮಕ್ಕಳ ಮೇಲಾಗುವ ಪರಿಣಾಮಗಳೇನು?; ‘ಸಾವಿತ್ರಿ’ ಸಿನಿಮಾ ಮೂಲಕ ಹೇಳಲಿದ್ದಾರೆ ನಟಿ ತಾರಾ

    ಖ್ಯಾತ ಸಾಹಿತಿ ಹೃದಯ ಶಿವ ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಗೀತರಚನೆ ಹಾಗೂ ಸಂಭಾಷಣೆ ಕೂಡ ಹೃದಯ ಶಿವ ಅವರದೆ. ಇಷ್ಟು ದಿನ ಗೀತರಚನೆಕಾರರಾಗಿದ್ದ ಹೃದಯ ಶಿವ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ.

    ಇದನ್ನೂ ಓದಿ: ‘ಮುಖವಾಡ ಇಲ್ಲದವನು’ ಟ್ರೇಲರ್​ ಹೊತ್ತು ಬಂದ

    ತಾರಾ, ಪ್ರಕಾಶ್ ಬೆಳವಾಡಿ, ಸಂಜು ಬಸಯ್ಯ(ಕಾಮಿಡಿ ಕಿಲಾಡಿಗಳು), ‌ಬೇಬಿ ಲೈಲಾ, ಪ್ರಮೋದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮೊಬೈಲ್ ಮುಂತಾದ ಆಧುನಿಕ ತಂತ್ರಜ್ಞಾನಗಳಿಂದ ಮಕ್ಕಳ ಮೇಲಾಗುವ ಪರಿಣಾಮಗಳೇನು? ಎನ್ನುವುದು ಚಿತ್ರದ ಕಥಾಹಂದರ.

    ಮಾದಕ ನಟಿಯರ ‘ಹೈ’ ನಿರೀಕ್ಷೆ ಸುಳ್ಳಾಯ್ತು! ಬಿಕ್ಕಿಬಿಕ್ಕಿ ಅಳುತ್ತಲೇ ದಂಗಾದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts