ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಭಾವಿ ಕಾಂಗ್ರೆಸ್ ನಾಯಕ, ಐದು ಬಾರಿ ಶಾಸಕರಾಗಿ ಚುನಾಯಿತರಾಗಿದ್ದ ವಸಂತ್ ಬಂಗೇರ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ 79 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಸಂತ್ ಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೇ 09ರಂದು ಬೆಳ್ತಂಗಡಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಬಿಜೆಪಿ, ಜನತಾದಳ ಹಾಗೂ ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆದ್ದು ವಸಂತ್ ಅವರು ಶಾಸಕರಾಗಿದ್ದರು. 1983 ಮತ್ತು 1985ರಲ್ಲಿ ಬಿಜೆಪಿಯಿಂದ, 1994ರಲ್ಲಿ ಜನತಾದಳದಿಂದ, 2008 ಮತ್ತು 2013ರಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆದ್ದಿದ್ದರು.