ರಾಜ್ಕೋಟ್: ಮೂರನೇ ಟೆಸ್ಟ್ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಮತ್ತೊಂದು ಆಘಾತ ಎದುರಾಗಿದೆ. ಮಧ್ಯಮ ಕ್ರಮಾಂಕ ಬ್ಯಾಟರ್, ಕನ್ನಡಿಗ ಕೆಎಲ್ ರಾಹುಲ್ 3ನೇ ಟೆಸ್ಟ್ನಿಂದ ಹೊರಬಿದ್ದಿದ್ದಾರೆ. ಬದಲಿಗೆ ಮತ್ತೋರ್ವ ಕನ್ನಡಿಗ ದೇವದತ್ ಪಡಿಕ್ಕಲ್ ತಂಡ ಸೇರ್ಪಡೆಯಾಗಲಿದ್ದು, ಅವರಿಗೆ ರಾಷ್ಟ್ರೀಯ ತಂಡದ ಚೊಚ್ಚಲ ಕರೆ ಎನಿಸಿದೆ. ಹೈದರಾಬಾದ್ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡ ಕಾರಣ 2ನೇ ಟೆಸ್ಟ್ನಿಂದ ಹೊರಗುಳಿದಿದ್ದ ರಾಹುಲ್ ಮತ್ತು ಜಡೇಜಾ, ಕೊನೇ 3 ಟೆಸ್ಟ್ಗಳಿಗೆ ತಂಡದಲ್ಲಿ ಸ್ಥಾನ ಪಡೆದಿದ್ದರೂ, ಫಿಟ್ನೆಸ್ ಪರೀೆಯಲ್ಲಿ ಉತ್ತೀರ್ಣರಾದರಷ್ಟೇ ಮರಳಿ ಕಣಕ್ಕಿಳಿಯಲಿದ್ದಾರೆ ಎಂದು ಬಿಸಿಸಿಐ ಸ್ಪಷ್ಟನೆ ಒದಗಿಸಿತ್ತು. ಬಲತೊಡೆ ಸ್ನಾಯುವಿನ ನೋವಿನಿಂದ ಬಳಲುತ್ತಿರುವ ರಾಹುಲ್ ಸಂಪೂರ್ಣವಾಗಿ ಫಿಟ್ ಆಗಲು ಇನ್ನೂ ಒಂದು ವಾರ ಕಾಲ ಸಮಯ ಹಿಡಿಯಲಿದೆ ಎಂದು ಎನ್ಸಿಎ ವೈದ್ಯಕಿಯ ತಂಡವು ಆಯ್ಕೆದಾರರಿಗೆ ತಿಳಿಸಿದೆ. ರಾಹುಲ್ ಸದ್ಯ ಎನ್ಸಿಎಯಲ್ಲಿ ಉಳಿಯಲಿದ್ದಾರೆ. ಆಲ್ರೌಂಡರ್ ರವೀಂದ್ರ ಜಡೇಜಾ ಫಿಟ್ನೆಸ್ ಪರೀೆಯಲ್ಲಿ ಉತ್ತೀರ್ಣರಾಗಿದ್ದು, ಮೂರನೇ ಟೆಸ್ಟ್ ಪಂದ್ಯದ ಆಯ್ಕೆಗೆ ಲಭ್ಯವಿದ್ದಾರೆ.
ಪ್ರವಾಸಿ ಇಂಗ್ಲೆಂಡ್ ವಿರುದ್ಧ ಮೊದಲೆರಡು ಟೆಸ್ಟ್ ಪಂದ್ಯದಲ್ಲಿ ರನ್ಬರ ಎದುರಿಸಿದ ಶ್ರೇಯಸ್ ಅಯ್ಯರ್ ಅವರನ್ನು ಅಂತಿಮ ಮೂರು ಪಂದ್ಯಗಳಿಂದ ಕೈ ಬಿಡಲಾಗಿದೆ. ಇನ್ನೂ ಕೆಎಲ್ ರಾಹುಲ್ ಸಹ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದು, ಅವರ ಗೈರಿನಲ್ಲಿ ದೇಶೀಯ ಟೂರ್ನಿಯಲ್ಲಿ ರನ್ಮಳೆ ಹರಿಸಿರುವ ಮುಂಬೈ ಬ್ಯಾಟರ್ ಸ್ರಾರ್ಜ್ ಖಾನ್ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡುವ ಸಾಧ್ಯತೆಗಳಿವೆ. 26 ವರ್ಷದ ಸ್ರಾರ್ಜ್ ಖಾನ್ ಸತತ ಮೂರು ದೇಶೀಯ ಕ್ರಿಕೆಟ್ ಋತುವಿನಲ್ಲಿ ನೂರರ ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ. ರಜತ್ ಪಾಟೀದಾರ್ ಬಳಿಕ ಸ್ರಾರ್ಜ್ ಸರಣಿಯಲ್ಲಿ ಟೀಮ್ ಇಂಡಿಯಾ ಟೆಸ್ಟ್ ಕ್ಯಾಪ್ ಪಡೆಯಲಿರುವ 2ನೇ ಆಟಗಾರ ಎನಿಸಲಿದ್ದಾರೆ. ವಿಕೆಟ್ ಕೀಪಿಂಗ್ನಲ್ಲಿ ಗಮರ್ನಾಹ ಎನಿಸಿದರೂ, ಬ್ಯಾಟಿಂಗ್ನಲ್ಲಿ ಗಮನಸೆಳೆಯಲು ವಿಲವಾಗಿರುವ ಕೆಎಸ್ ಭರತ್ ಪ್ರದರ್ಶನ ಬಗ್ಗೆ ಟೀಮ್ ಮ್ಯಾನೇಜ್ಮೆಂಟ್ ತೃಪ್ತಿ ಹೊಂದಿಲ್ಲ ಎನ್ನಲಾಗಿದೆ. ಬದಲಿಗೆ 23 ವರ್ಷದ ಧ್ರುವ್ ಜುರೆಲ್ ಅವಕಾಶ ಪಡೆಯುವ ನಿರೀೆ ಇದೆ.