More

    ಸಾಗುವಾನಿ ಮರದ ತುಂಡುಗಳು ವಶ

    ಬಾಳೆಹೊನ್ನೂರು: ಬಾಳೆಹೊನ್ನೂರು ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಹಲಸೂರು ಮೀಸಲು ಅರಣ್ಯದಲ್ಲಿ ಅಕ್ರಮವಾಗಿ ಸಾಗುವಾನಿ ಮರಗಳನ್ನು ಕತ್ತರಿಸಿ ಇಟ್ಟಿರುವುದನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಹಲಸೂರು ಮೀಸಲು ಅರಣ್ಯದ ಕಗ್ಗನಳ್ಳದಲ್ಲಿ ಎರಡು ಸಾಗುವಾನಿ ಮರಗಳನ್ನು ಕಡಿದು ತುಂಡುಗಳನ್ನಾಗಿ ಮಾಡಿ ಸಂಗ್ರಹಿಸಿಟ್ಟಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಮರದ ತುಂಡುಗಳು ಕಂಡುಬಂದಿವೆ. ಮರದ ತುಂಡುಗಳು ಒಂದು ಲಕ್ಷ ರೂಪಾಯಿ ಮೌಲ್ಯದ್ದಾಗಿವೆ ಎಂದು ಆರ್‌ಎಫ್‌ಒ ಸಂದೀಪ್ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts