ತುಮಕೂರು: ತಾಲೂಕಿನ ಹಿರೇಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಕೆಲಕಾಲ ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಯಿತು.
ಕೆಎಸ್ಆರ್ಟಿಸಿ ಬಸ್, ಕ್ಯಾಂಟರ್, ಇನ್ನೋವಾ ಕಾರು ಹಾಗೂ ಸ್ವಿಫ್ಟ್ ಕಾರಿನ ನಡುವೆ ಡಿಕ್ಕಿಯಾಗಿದೆ. ಈ ಸರಣಿ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ವಾಹನಗಳ ದಟ್ಟಣೆಯಿಂದಾಗಿ ನಿಧಾನವಾಗಿ ವಾಹನಗಳು ಚಲಿಸುತ್ತಿದ್ದವು, ವೇಗವಾಗಿ ಹಿಂದಿನಿಂದ ಬಂದ ವಾಹನಗಳು ನಿಂತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ. ನಂತರ ಕ್ಯಾಂಟರ್, ಇನ್ನೋವಾ ಕಾರು ಹೀಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಕ್ಯಾತ್ಸಂದ್ರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ಗಾಯಕ ಮೂಸೆವಾಲ ಹತ್ಯೆ ಬೆನ್ನಲ್ಲೇ ಎಚ್ಚೆತ್ತ ಪಂಜಾಬ್ ಸರ್ಕಾರ: ಮತ್ತೆ 400 ಮಂದಿಗೆ ಭದ್ರತೆ