ಕೊಡಗು: ಕುಶಾಲನಗರ-ಮಡಿಕೇರಿ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಕಾರೊಂದು ನಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡಿರುವ ಮೂವರನ್ನು ಚಿಕಿತ್ಸೆಗಾಗಿ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಕುಶಾಲನಗರ-ಮಡಿಕೇರಿ ಹೆದ್ದಾರಿಯ ಆನೆಕಾಡು ಎಂಬಲ್ಲಿ ಸರ್ಕಾರಿ ಬಸ್ಸೊಂದಕ್ಕೆ ಹಿಂದಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಹೀಗೆ ಡಿಕ್ಕಿ ಹೊಡೆದು ನಿಂತಿದ್ದ ಕಾರಿಗೆ ಮತ್ತೊಂದು ಕಾರು ಬಂದು ಡಿಕ್ಕಿಯಾಗಿದ್ದು, ಈ ರಭಸಕ್ಕೆ ಮೊದಲು ಡಿಕ್ಕಿಯಾಗಿದ್ದ ಕಾರು ನಜ್ಜುಗುಜ್ಜಾಗಿದೆ.
ಈ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ; ಹೆಂಡ್ತಿಯನ್ನು ಉಸಿರುಗಟ್ಟಿಸಿ ಕೊಂದ ಗಂಡ ತಾನು ನೇಣು ಬಿಗಿದುಕೊಂಡ..
ಒಂದೂವರೆ ವರ್ಷದ ಮಗುವಿಗೆ ಹೊಡೆದು ವಿಕೃತವಾಗಿ ವರ್ತಿಸಿದ್ದ ತಾಯಿಯ ಬಂಧನ; ಗಂಡನ ಮೇಲೆ ಸಿಟ್ಟಿಗೆ ಮಗುವಿಗೆ ಹಿಂಸೆ…