ಗುದ್ದಿದವನಿಗೆ ಬಂದು ಮತ್ತೊಬ್ಬ ಗುದ್ದಿದ; ಹೆದ್ದಾರಿಯಲ್ಲಿ ಸರಣಿ ಅಪಘಾತ, ನಜ್ಜುಗುಜ್ಜಾದ ಕಾರು..

ಕೊಡಗು: ಕುಶಾಲನಗರ-ಮಡಿಕೇರಿ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಕಾರೊಂದು ನಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡಿರುವ ಮೂವರನ್ನು ಚಿಕಿತ್ಸೆಗಾಗಿ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕುಶಾಲನಗರ-ಮಡಿಕೇರಿ ಹೆದ್ದಾರಿಯ ಆನೆಕಾಡು ಎಂಬಲ್ಲಿ ಸರ್ಕಾರಿ ಬಸ್ಸೊಂದಕ್ಕೆ ಹಿಂದಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಹೀಗೆ ಡಿಕ್ಕಿ ಹೊಡೆದು ನಿಂತಿದ್ದ ಕಾರಿಗೆ ಮತ್ತೊಂದು ಕಾರು ಬಂದು ಡಿಕ್ಕಿಯಾಗಿದ್ದು, ಈ ರಭಸಕ್ಕೆ ಮೊದಲು ಡಿಕ್ಕಿಯಾಗಿದ್ದ ಕಾರು ನಜ್ಜುಗುಜ್ಜಾಗಿದೆ. ಈ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಕುಶಾಲನಗರ … Continue reading ಗುದ್ದಿದವನಿಗೆ ಬಂದು ಮತ್ತೊಬ್ಬ ಗುದ್ದಿದ; ಹೆದ್ದಾರಿಯಲ್ಲಿ ಸರಣಿ ಅಪಘಾತ, ನಜ್ಜುಗುಜ್ಜಾದ ಕಾರು..