ವಿದ್ಯಾರ್ಥಿ ದೆಸೆಯಲ್ಲಿ ಸೇವಾ ಮನೋಭಾವ ಮುಖ್ಯ

blank

ಬೆಳಗಾವಿ: ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಬೆಳೆಯಲು ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ವಿದ್ಯಾರ್ಥಿ ದಿಸೆಯಲ್ಲಿಯೇ ಸೇವಾ ಮನೋಭಾವ ರೂಢಿಸಿಕೊಳ್ಳಬೇಕು ಎಂದು ಜಾರವಾಡಿ ಗ್ರಾಪಂ ಅಧ್ಯಕ್ಷ ಸಾಗರ ಪಾಟೀಲ ಸಲಹೆ ನೀಡಿದರು.
ತಾಲೂಕಿನ ಜಾರವಾಡಿ ಗ್ರಾಮದಲ್ಲಿ ಕೆಎಲ್‌ಇ ಸಂಸ್ಥೆಯ ಜಿಎ ಪದವಿ ಪೂರ್ವ ಕಾಲೇಜ್ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಎನ್‌ಎಸ್‌ಎಸ್ ಶಿಬಿರದಲ್ಲಿ ರೂಢಿಸಿಕೊಂಡ ಶಿಸ್ತುಬದ್ಧ ಜೀವನ ಶೈಲಿ, ರಾಷ್ಟ್ರೀಯ ಮನೋಭಾವನೆ, ಶ್ರಮದಾನದ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಗುರಿ ಸಾಧನೆ ಕಡೆ ಸಾಗಬೇಕು ಎಂದರು.
ಕೆಎಲ್‌ಇ ಕಾಲೇಜು ಪ್ರಾಚಾರ್ಯ ಆರ್.ಎಸ್.ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ತಾನಾಜಿ ಪಾಟೀಲ, ಮರಾಠಿ ಶಾಲೆಯ ಮುಖ್ಯ ಶಿಕ್ಷಕಿ ಪಿ.ಬಿ. ಹಾಲೆನ್ನವರ, ಟಿ.ಪಿ.ಬಾನಕರೆ, ಡಿ.ಎಸ್. ಪವಾರ, ಎಸ್.ಆರ್. ಗುಮ್ಮಗೋಳ, ಉಪನ್ಯಾಸಕ ವಿನಾಯಕ ನೀರಲಕಟ್ಟಿ, ಎನ್‌ಎಸ್‌ಎಸ್ ಶಿಬಿರಾರ್ಥಿಗಳು ಇತರರಿದ್ದರು.

Share This Article

ವೆಜ್​ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ Recipe

ಸ್ಟ್ರೀಟ್​ ಫುಡ್​ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…

ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips

ಹೈಹೀಲ್ಸ್​​ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…

ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್​ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…