Maha Kumbh ಮೇಳಕ್ಕೆ ತೆರಳಿ ವಾಪಸ್​ ಆಗುತ್ತಿದ್ದಾಗ ಭೀಕರ ರಸ್ತೆ ಅಪಘಾತ; ಏಳು ಮಂದಿ ಸಾವು

Road Accident

ಜಬಲ್​ಪುರ್​: ಜನವರಿ 13ರಂದು ಆರಂಭವಾದ ಮಹಾಕುಂಭಮೇಳವು (Maha Kumbh Mela) ಈಗಾಗಲೇ ನಾನಾ ಕಾರಣಗಳಿಂದ ಸದ್ದು ಮಾಡುತ್ತಿದ್ದು, ವಿಶ್ವದ ಗಮನ ಸೆಳೆಯುತ್ತಿದೆ ಎಂದರೆ ತಪ್ಪಾಗಲಾರದು. ಇದೀಗ ಮಹಾಕುಂಭಮೇಳಕ್ಕೆ ತೆರಳಿ ವಾಪಸ್​ ಆಗುತ್ತಿದ್ಧಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದ 7 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಘಟನೆಯು ಮಧ್ಯಪ್ರದೇಶದ ಜಬಲ್​ಪುರ ಜಿಲ್ಲೆಯ ಸಿಹೋರಾ ಬಳಿ ರಾಷ್ಟ್ರೀಯ ಹೆದ್ದಾರಿ-30ರಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತ ಏಳು ಮಂದಿ ಆಂಧ್ರಪ್ರದೇಶ ಮೂಲದವರು ಎಂದು ತಿಳಿದು ಬಂದಿದೆ. 

ಘಟನೆಯ ಕುರಿತು ಮಾತನಾಡಿರುವ ಜಬಲ್​ಪುರದ ಎಎಸ್​ಪಿ ಸೂರ್ಯಕಾಂತ್ ಶರ್ಮ, ಮೃತರೆಲ್ಲರೂ ಆಂಧ್ರಪ್ರದೇಶದ ನಿವಾಸಿಗಳೆಂದು ತಿಳಿದು ಬಂದಿದ್ದು, ಮಹಾಕುಂಭಮೇಳಕ್ಕೆ (Maha Kumbh Mela) ತೆರಳಿ ವಾಪಸ್​ ಆಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳು ಹಾಗೂ ಗಾಯಾಳುಗಳು ಹೇಳುವ ಪ್ರಕಾರ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಅಪಘಾತದ ಬಳಿಕ ಲಾರಿಯನ್ನು ಬಿಟ್ಟು ಚಾಲಕ ಪರಾರಿಯಾಗಿದ್ಧಾನೆ.

ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಚಾಲಕನನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದ್ದು, ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಜಬಲ್​ಪುರದ ಎಎಸ್​ಪಿ ಸೂರ್ಯಕಾಂತ್ ಶರ್ಮ ತಿಳಿಸಿದ್ದಾರೆ.

ಪಂಜಾಬ್​ ಸಿಎಂ ಆಗಿ ಕೇಜ್ರಿವಾಲ್ ಪದಗ್ರಹಣ? ನಿಜವಾಗುತ್ತ Congress ನಾಯಕರು ನುಡಿದ ಭವಿಷ್ಯ

ಹಾಡಹಗಲೇ ವಿದ್ಯಾರ್ಥಿನಿಯನ್ನು Kidnap ಮಾಡಿದ ಯುವಕರು; ಆರೋಪಿಗಳ ಫೋಟೋ ರಿಲೀಸ್​, ವಿಡಿಯೋ ವೈರಲ್​

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…