ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದೆ.
ದೇಶದ ಮುತ್ಸದ್ಧಿಯ ನಿಧನಕ್ಕೆ ದೇಶಾದ್ಯಂತ ಏಳು ದಿನಗಳವರೆಗೆ ಶೋಕಾಚರಣೆ ಮಾಡಲಾಗುತ್ತದೆ. ಆಗಸ್ಟ್ 31ರಿಂದ ಸೆಪ್ಟಂಬರ್ 6ರ ವರೆಗೆ (ಎರಡೂ ದಿನಗಳು ಸೇರಿ) ಈ ಶೋಕಾಚರಣೆ ಜಾರಿಯಲ್ಲಿರಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.
ಈ ನಿಮಿತ್ತ ದೇಶದೆಲ್ಲೆಡೆ ಸರ್ಕಾರಿ ಕಚೇರಿ, ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಈ ಅವಧಿಯಲ್ಲಿ ಸಾರ್ವಜನಿಕ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯದಲ್ಲೂ ಕೂಡ ಇದೇ ನಿಯಮ ಪಾಲನೆಯಾಗಲಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಮೊಹಮ್ಮದ್ ನಯೀಮ್ ಮೊಮಿನ್ ತಿಳಿಸಿದ್ದಾರೆ.