ಬೆಂಗಳೂರು: ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ಹೊಂದಿದ್ದ ವ್ಯಕ್ತಿಯೋರ್ವನ ಬ್ಯಾಗ್ ಎಗರಿಸಿದ್ದ ಖದೀಮರ ತಂಡವನ್ನು ಉಪ್ಪಾರಪೇಟೆ ಪೊಲೀಸರು ಎಡೆಮುರಿ ಕಟ್ಟಲು ಯಶಸ್ವಿಯಾಗಿದ್ದಾರೆ.
ಜು.17 ರಂದು ರಾತ್ರಿ ಮೆಜೆಸ್ಟಿಕ್ನಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಈ ಕಳ್ಳತನ ನಡೆದಿತ್ತು. ದುಬೈನಿಂದ ಬಂದಿದ್ದ ವ್ಯಕ್ತಿಯೋರ್ವನ ಬ್ಯಾಗ್ಅನ್ನು ಅಲ್ಲೇ ಇದ್ದ ಕಳ್ಳರ ತಂಡ ಕ್ಷಣಾರ್ಧದಲ್ಲಿ ಎಗರಿಸಿ ಪರಾರಿಯಾಗಿತ್ತು.
ಇದನ್ನೂ ಓದಿ: ಚಾಲಕನ ನಿರ್ಲಕ್ಷ್ಯತನ… ತಮ್ಮದಲ್ಲದ ತಪ್ಪಿಗೆ ಪ್ರಾಣ ಬಿಟ್ಟ ಪ್ರಯಾಣಿಕರು
ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಗಳಿಗಾಗಿ ಬಲೆ ಬೀಸಿದ ಪೊಲೀಸರು ರಾಜು ನಾಯ್ಡು, ರವಿ, ದಾಮೋದರನ್, ರಂಗನ್ ಸೇರಿ 7 ಜನರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಒಂದು ಪಾಸ್ಪೋರ್ಟ್, ಕ್ರೆಡಿಟ್ ಕಾರ್ಡ್ಸ್, ನಗದು, ಚಿನ್ನಾಭರಣ ಸೇರಿದಂತೆ ಒಟ್ಟು 3.90 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಇವರ ಬಂಧನದಿಂದ ಮೊಬೈಲ್ ರಾಬರಿ ಮತ್ತು ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.
#BBK8: ಖುಲಾಯಿಸಿದ ಲಕ್, ಫಿನಾಲೆಗೂ ಮೊದಲೇ ಹಣ ಗೆದ್ದ ಅರವಿಂದ್