More

    ಶಾಲೆಗಳಿಗೆ ಅನಧಿಕೃತ ರಜೆ

    ಸಿಂಧನೂರು: ಏಳನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಶಿಫಾರಸುಗಳ ಅನುಷ್ಠಾನ, ಹಳೆಯ ಪಿಂಚಣಿ ಯೋಜನೆ ಜಾರಿಗೆ ಆಗ್ರಹ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಕರೆ ನೀಡಿದ್ದ ಮುಷ್ಕರಕ್ಕೆ ತಾಲೂಕಿನಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಯಿತು.

    ಸರ್ಕಾರಿ ಕಚೇರಿಗಳಲ್ಲಿ ಕೆಲಸ-ಕಾರ್ಯಗಳು ಸ್ತಬ್ಧಗೊಂಡಿದ್ದವು. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಇತರ ಸಿಬ್ಬಂದಿ ಇರಲಿಲ್ಲ. ಜನರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮನೆಗಳಿಗೆ ಮರಳಿದರು. ಇದರಿಂದಾಗಿ ರೋಗಿಗಳು ತೊಂದರೆ ಎದುರಿಸಬೇಕಾಯಿತು. ಉಪ ನೋಂದಣಿ ಕಚೇರಿಯಲ್ಲಿ ಸಿಬ್ಬಂದಿ ಸುಳಿವಿರಲಿಲ್ಲ. ನಗರಸಭೆ ಸಿಬ್ಬಂದಿಗೂ ಕೆಲಸಕ್ಕೆ ಗೈರಾಗಿದ್ದರು.

    ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿತ್ತು. ಕೆಲ ಶಿಕ್ಷಕರು ಹೋರಾಟದಲ್ಲಿ ಪಾಲ್ಗೊಂಡರೆ, ಇನ್ನುಳಿದವರು ವೈಯಕ್ತಿಕ ಕೆಲಸಗಳಿಗೆ ಆದ್ಯತೆ ನೀಡಿದರು. ಕೆಲವು ಸಿಬ್ಬಂದಿ ಊರುಗಳಿಗೆ ತೆರಳಿದ್ದರು. ಸೇರಿಕೊಳ್ಳುವಂತಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts