More

    ಇನ್ನೊಂದೆರಡು ವರ್ಷ ಅತಿಯಾಗಿ ಕೆಲಸ ಮಾಡಬೇಡಿ: ಆರೋಗ್ಯ ಸಚಿವರ ಸಲಹೆ!

    ನವದೆಹಲಿ: ಯುವಕರು ವಾರಕ್ಕೆ 70 ಗಂಟೆಗಳ ಕೆಲಸ ಮಾಡಬೇಕು ಎಂದು ಸಾಫ್ಟ್​ವೇರ್ ಕಂಪನಿಯಾಗಿರುವ ಇನ್​​ಫೊಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರು ನೀಡಿರುವ ಹೇಳಿಕೆ ಚರ್ಚೆಯಲ್ಲಿರುವಾಗಲೇ ಕೇಂದ್ರ ಆರೋಗ್ಯ ಸಚಿವರು ಅತಿಯಾಗಿ ಕೆಲಸ ಮಾಡಬೇಡಿ ಎಂದಿರುವ ಹೇಳಿಕೆಯೊಂದು ಕೇಳಿಬಂದಿದೆ.

    ದೇಶಾದ್ಯಂತ ಹಠಾತ್ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್​ಸುಖ್ ಮಾಂಡವೀಯ ಅತಿಯಾಗಿ ಕೆಲಸ ಮಾಡಬಾರದು ಎಂಬ ಮುನ್ನೆಚ್ಚರಿಕೆಯ ಸಂದೇಶವೊಂದನ್ನು ಸಾರ್ವಜನಿಕರಿಗೆ ನೀಡಿದ್ದಾರೆ. ಐಸಿಎಂಆರ್​ ಅಧ್ಯಯನ ವರದಿಯನ್ನು ಉಲ್ಲೇಖಿಸಿ ಅವರು ಈ ಮಾತನ್ನು ಹೇಳಿದ್ದಾರೆ.

    ಇದನ್ನೂ ಓದಿ: ಸಾಫ್ಟ್​ವೇರ್​ ಉದ್ಯೋಗ: ಫ್ರೆಷರ್ಸ್​ಗೆ ಭಾರತದಲ್ಲೇ ಕಡಿಮೆ ಸಂಬಳ, ಜಾಸ್ತಿ ಕೆಲಸ!

    ಕೋವಿಡ್​-19 ಸೋಂಕಿನಿಂದ ತೀವ್ರವಾಗಿ ಬಳಲಿ ಚೇತರಿಸಿಕೊಂಡವರು ಸ್ವಲ್ಪ ಸಮಯ ಅತಿಯಾಗಿ ಕೆಲಸ ಮಾಡಬಾರದು. ಇನ್ನೂ ಒಂದೆರಡು ವರ್ಷ ಅವರು ಅದನ್ನು ಪಾಲಿಸುವುದು ಒಳಿತು ಎಂಬುದು ಐಸಿಎಂಆರ್​ ನಡೆಸಿದ ಅಧ್ಯಯನದಲ್ಲಿ ಕಂಡುಬಂದಿದೆ ಎಂದು ಅವರು ಸಚಿವರು ತಿಳಿಸಿದ್ದಾರೆ.

    ಅದರಲ್ಲೂ ಗುಜರಾತ್​ನಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಅತಿಯಾಗಿದ್ದು, ಹಠಾತ್ ಕುಸಿದು ಬಿದ್ದು ಸಾಯುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇತ್ತೀಚೆಗೆ ಗಾರ್ಭಾ ಸಮಾರಂಭವೊಂದರಲ್ಲಿ 24 ಗಂಟೆಗಳಲ್ಲಿ 10 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿದ್ದರು. ಮಾತ್ರವಲ್ಲ, ಯುವಕರು ಮಧ್ಯವಯಸ್ಕರು ಹೃದಯಾಘಾತಕ್ಕೆ ಒಳಗಾಗಿ ಸಾಯುತ್ತಿರುವ ಪ್ರಕರಣ ಹೆಚ್ಚಾಗಿದೆ.

    ಯುವಕರೇಕೆ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ ಎಂದು ಅಚ್ಚರಿಯೇ?: 70 ಗಂಟೆ ಕೆಲಸ.. ಮೂರ್ತಿ ವರ್ಸಸ್ ಮೂರ್ತಿ…

    ಫ್ರೆಷರ್ಸ್​ಗೆ ಹೋಲಿಸಿದ್ರೆ ಇನ್​ಫೊಸಿಸ್ ಸಿಇಒ ಸಂಬಳ 2,200 ಪಟ್ಟು ಹೆಚ್ಚು!; ಅವರು ಎಷ್ಟು ಗಂಟೆ ಕೆಲಸ ಮಾಡ್ತಾರೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts